<p><strong>ನವದೆಹಲಿ:</strong> ಲಡಾಖ್ ಗಡಿಯಲ್ಲಿ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಶಮನಗೊಳಿಸುವ ಸಂಬಂಧ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾ ರಕ್ಷಣಾ ಸಚಿವ ವೇ ಫೆಂಗ್ ಶುಕ್ರವಾರ ರಾತ್ರಿರಷ್ಯಾ ರಾಜಧಾನಿ ಮಾಸ್ಕೊದಲ್ಲಿ ಎರಡೂವರೆ ತಾಸು ಮಾತುಕತೆ ನಡೆಸಿದರು.</p>.<p>ಲಡಾಖ್ ಗಡಿಯಲ್ಲಿ ಶಾಂತಿ ಮರು ಸ್ಥಾಪಿಸುವ ನಿಟ್ಟಿನಲ್ಲಿ ಚೀನಾ ಮೊದಲುವಾಸ್ತವ ನಿಯಂತ್ರಣ ರೇಖೆಯನ್ನು (ಎಲ್ಎಸಿ) ಗೌರವಿಸುವುದನ್ನು ಕಲಿಯಲಿಎಂದು ರಾಜನಾಥ್ ಸಿಂಗ್ ನೇರವಾಗಿ ಹೇಳಿದ್ದಾರೆ.</p>.<p>ಗಡಿಯಲ್ಲಿ ನಿಯೋಜಿಸಿರುವ ಸೇನೆಯನ್ನು ತಕ್ಷಣ ವಾಪಸ್ ಕರೆಸಿಕೊಳ್ಳಬೇಕು ಮತ್ತು ಎಲ್ಎಸಿಯಲ್ಲಿ ಯಥಾಸ್ಥಿತಿ ಬದಲಿಸುವ ದುಸ್ಸಾಹಸಕ್ಕೆ ಕೈ ಹಾಕದಂತೆ ಅವರು ಚೀನಾಕ್ಕೆ ನೇರವಾಗಿ ಎಚ್ಚರಿಕೆ ನೀಡಿದ್ದಾರೆ.</p>.<p>ಮಾಸ್ಕೊದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ರಕ್ಷಣಾ ಸಚಿವರ ಸಮಾವೇಶದಲ್ಲಿ ಭಾಗವಹಿಸಿರುವ ಸಿಂಗ್–ಫೆಂಗ್ ಅವರು ಲಡಾಖ್ ಗಡಿ ಸಂಘರ್ಷದ ನಂತರದ ಮೊದಲ ಬಾರಿಗೆ ಮುಖಾಮುಖಿಯಾದರು. ಹಾಗಾಗಿ ಈ ಮಾತುಕತೆ ಸಹಜವಾಗಿ ಕುತೂಹಲ ಕೆರಳಿಸಿತ್ತು.</p>.<p>ಪೂರ್ವ ಲಡಾಖ್ ಗಡಿಯಲ್ಲಿ ಚೀನಾ ಸೇನೆಯ ಆಕ್ರಮಣಶೀಲ ಮನೋಭಾವದ ಬಗ್ಗೆ ಫೆಂಗ್ ಗಮನ ಸೆಳೆದ ಅವರು, ಸದ್ಯಗಡಿ ವಾತಾವರಣ ಮತ್ತಷ್ಟು ಬಿಗಡಾಯಿಸುವಂತಹ ಕ್ರಮಕ್ಕೆ ಎರಡೂ ರಾಷ್ಟ್ರಗಳು ಕೈಹಾಕಬಾರದು ಎಂದು ಸಲಹೆ ಮಾಡಿದ್ದಾರೆ.</p>.<p>ಭಾರತ ತನ್ನ ಸಾರ್ವಭೌಮತೆ ಮತ್ತುಗಡಿ ರಕ್ಷಣೆಗೆ ಬದ್ಧ. ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಎರಡೂ ರಾಷ್ಟ್ರಗಳು ಆದ್ಯತೆ ನೀಡಬೇಕು.ಸದ್ಯಗಡಿಯಲ್ಲಿಯ ಸ್ಥಿತಿಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆಸಿಂಗ್ ಮನವಿ ಮಾಡಿದರು.</p>.<p>ಶಾಂತಿಯುತ ಮಾಗರ್ದಲ್ಲಿ ಪರಿಹಾರ ಕಂಡುಕೊಳ್ಳಲು ಬಯಸುವುದಾಗಿ ಚೀನಾ ಹೇಳಿದೆ ಎಂದು ಶನಿವಾರ ಬಿಡುಗಡೆಯಾದ ರಕ್ಷಣಾ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ಹೇಳಿದೆ.</p>.<p>ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಮತ್ತು ರಷ್ಯಾದಲ್ಲಿರುವ ಭಾರತದ ರಾಯಭಾರಿ ಡಿ.ಬಿ. ವೆಂಕಟೇಶ್ ಉನ್ನತ ಮಟ್ಟದ ಮಾತುಕತೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲಡಾಖ್ ಗಡಿಯಲ್ಲಿ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಶಮನಗೊಳಿಸುವ ಸಂಬಂಧ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾ ರಕ್ಷಣಾ ಸಚಿವ ವೇ ಫೆಂಗ್ ಶುಕ್ರವಾರ ರಾತ್ರಿರಷ್ಯಾ ರಾಜಧಾನಿ ಮಾಸ್ಕೊದಲ್ಲಿ ಎರಡೂವರೆ ತಾಸು ಮಾತುಕತೆ ನಡೆಸಿದರು.</p>.<p>ಲಡಾಖ್ ಗಡಿಯಲ್ಲಿ ಶಾಂತಿ ಮರು ಸ್ಥಾಪಿಸುವ ನಿಟ್ಟಿನಲ್ಲಿ ಚೀನಾ ಮೊದಲುವಾಸ್ತವ ನಿಯಂತ್ರಣ ರೇಖೆಯನ್ನು (ಎಲ್ಎಸಿ) ಗೌರವಿಸುವುದನ್ನು ಕಲಿಯಲಿಎಂದು ರಾಜನಾಥ್ ಸಿಂಗ್ ನೇರವಾಗಿ ಹೇಳಿದ್ದಾರೆ.</p>.<p>ಗಡಿಯಲ್ಲಿ ನಿಯೋಜಿಸಿರುವ ಸೇನೆಯನ್ನು ತಕ್ಷಣ ವಾಪಸ್ ಕರೆಸಿಕೊಳ್ಳಬೇಕು ಮತ್ತು ಎಲ್ಎಸಿಯಲ್ಲಿ ಯಥಾಸ್ಥಿತಿ ಬದಲಿಸುವ ದುಸ್ಸಾಹಸಕ್ಕೆ ಕೈ ಹಾಕದಂತೆ ಅವರು ಚೀನಾಕ್ಕೆ ನೇರವಾಗಿ ಎಚ್ಚರಿಕೆ ನೀಡಿದ್ದಾರೆ.</p>.<p>ಮಾಸ್ಕೊದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ರಕ್ಷಣಾ ಸಚಿವರ ಸಮಾವೇಶದಲ್ಲಿ ಭಾಗವಹಿಸಿರುವ ಸಿಂಗ್–ಫೆಂಗ್ ಅವರು ಲಡಾಖ್ ಗಡಿ ಸಂಘರ್ಷದ ನಂತರದ ಮೊದಲ ಬಾರಿಗೆ ಮುಖಾಮುಖಿಯಾದರು. ಹಾಗಾಗಿ ಈ ಮಾತುಕತೆ ಸಹಜವಾಗಿ ಕುತೂಹಲ ಕೆರಳಿಸಿತ್ತು.</p>.<p>ಪೂರ್ವ ಲಡಾಖ್ ಗಡಿಯಲ್ಲಿ ಚೀನಾ ಸೇನೆಯ ಆಕ್ರಮಣಶೀಲ ಮನೋಭಾವದ ಬಗ್ಗೆ ಫೆಂಗ್ ಗಮನ ಸೆಳೆದ ಅವರು, ಸದ್ಯಗಡಿ ವಾತಾವರಣ ಮತ್ತಷ್ಟು ಬಿಗಡಾಯಿಸುವಂತಹ ಕ್ರಮಕ್ಕೆ ಎರಡೂ ರಾಷ್ಟ್ರಗಳು ಕೈಹಾಕಬಾರದು ಎಂದು ಸಲಹೆ ಮಾಡಿದ್ದಾರೆ.</p>.<p>ಭಾರತ ತನ್ನ ಸಾರ್ವಭೌಮತೆ ಮತ್ತುಗಡಿ ರಕ್ಷಣೆಗೆ ಬದ್ಧ. ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಎರಡೂ ರಾಷ್ಟ್ರಗಳು ಆದ್ಯತೆ ನೀಡಬೇಕು.ಸದ್ಯಗಡಿಯಲ್ಲಿಯ ಸ್ಥಿತಿಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆಸಿಂಗ್ ಮನವಿ ಮಾಡಿದರು.</p>.<p>ಶಾಂತಿಯುತ ಮಾಗರ್ದಲ್ಲಿ ಪರಿಹಾರ ಕಂಡುಕೊಳ್ಳಲು ಬಯಸುವುದಾಗಿ ಚೀನಾ ಹೇಳಿದೆ ಎಂದು ಶನಿವಾರ ಬಿಡುಗಡೆಯಾದ ರಕ್ಷಣಾ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ಹೇಳಿದೆ.</p>.<p>ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಮತ್ತು ರಷ್ಯಾದಲ್ಲಿರುವ ಭಾರತದ ರಾಯಭಾರಿ ಡಿ.ಬಿ. ವೆಂಕಟೇಶ್ ಉನ್ನತ ಮಟ್ಟದ ಮಾತುಕತೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>