'ನಿಕಿತಾ, ಶಾಂತನು, ದಿಶಾ ಮತ್ತು ಇತರರು ಟೂಲ್ಕಿಟ್ ಸೃಷ್ಟಿ ಮಾಡುವುದರಲ್ಲಿ ಪರಸ್ಪರ ತೊಡಗಿಸಿಕೊಂಡಿದ್ದರು. ನಿಕಿತಾ ಅವರ ಫೋನ್ನಲ್ಲಿ ಸಿಕ್ಕ ಮಾಹಿತಿಯ ಆಧಾರದ ಮೇಲೆ ಹಲವು ತಂಡಗಳನ್ನು ಮಹಾರಾಷ್ಟ್ರದ ಬೀಡ್ ಜಿಲ್ಲೆಗೆ ಮತ್ತು ಬೆಂಗಳೂರಿಗೆ ಕಳುಹಿಸಲಾಗಿದೆ. ಶಾಂತನು ಬೀಡ್ನ ಆತನ ಮನೆಯಲ್ಲಿ ಪತ್ತೆಯಾಗಿಲ್ಲ. ಆತನಿಗಾಗಿ ಶೋಧ ನಡೆಯುತ್ತಿದೆ. ನಿಕಿತಾ ಕೂಡ ತಲೆಮರೆಸಿಕೊಂಡಿದ್ದಾರೆ,' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.