ಚುನಾವಣಾ ಪ್ರಚಾರದ ನಿಮಿತ್ತ ದಕ್ಷಿಣ ತಮಿಳುನಾಡಿನಲ್ಲಿ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ, ಕಾಂಗ್ರೆಸ್ಸಿನ ಉನ್ನತ ಮುಖಂಡರು, ಉಪ್ಪು ತಯಾರಕ ಕಾರ್ಮಿಕರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಇದೇ ವೇಳೆ ಉಪ್ಪು ತಯಾರಕರು, ತಾವು ಎದುರಿಸುತ್ತಿರುವ ಆರ್ಥಿಕ, ಆರೋಗ್ಯ ಹಾಗೂ ಇನ್ನಿತರ ಸಮಸ್ಯೆಗಳನ್ನು ಹೇಳಿಕೊಂಡರು.