ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಒಂದೇ ನ್ಯಾಯಾಲಯಕ್ಕೆ ವಹಿಸಿರುವುದರ ಬಗ್ಗೆಯೂ ಪೀಠವು ಕಳವಳ ವ್ಯಕ್ತಪಡಿಸಿತು. ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಒಂದೊಂದು ಜಿಲ್ಲೆಯಲ್ಲಿ ಒಂದೊಂದು ನ್ಯಾಯಾಲಯವನ್ನು ನಿಯೋಜಿಸಬೇಕು. ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸುವ ನ್ಯಾಯಾಲಯಗಳಿಗೆ ಸಂಬಂಧಿಸಿ ಏಕರೂಪತೆಯೂ ಇಲ್ಲ ಎಂದು ನ್ಯಾಯಾಲಯದ ಸಹಾಯಕರಾಗಿರುವ (ಆಮಿಕಸ್ ಕ್ಯೂರಿ) ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಹೇಳಿದರು. ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳ ವಿರುದ್ಧ 4,442 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಈ ಸಂಖ್ಯೆ ಹೆಚ್ಚುತ್ತಲೇ ಇದೆ ಎಂಬುದನ್ನೂ ನ್ಯಾಯಾಲಯವು ಗಣನೆಗೆ ತೆಗೆದುಕೊಂಡಿತು.