ನವದೆಹಲಿ: ಅದಾನಿ ಪ್ರಕರಣದಲ್ಲಿ ನನ್ನ ಮುಂದಿನ ಭಾಷಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯ ಕಾಡಿದ್ದರಿಂದ ನನ್ನ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ಲೋಕಸಭೆ ಸದಸ್ಯತ್ವ ಅನರ್ಹಗೊಂಡ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅದಾನಿ ಪ್ರಕರಣದಲ್ಲಿ ದಿಗಿಲುಗೊಂಡಿರುವ ಸರ್ಕಾರ ಜನರ ದಿಕ್ಕು ತಪ್ಪಿಸಲು ಈ ಆಟವನ್ನು ಆಡಿದೆ ಎಂದು ಆರೋಪಿಸಿದ್ದಾರೆ.
ನನ್ನನ್ನು ಅನರ್ಹಗೊಳಿಸಿರುವುದರಿಂದ ಅಥವಾ ಜೈಲಿಗೆ ಅಟ್ಟುವುದರಿಂದ ನಾನು ಹೆದರುವುದಿಲ್ಲ ಅಥವಾ ಹಿಂದಕ್ಕೆ ಸರಿಯುವುದಿಲ್ಲ. ಷೇರು ಅಕ್ರಮದಲ್ಲಿ ಸಿಲುಕಿರುವ ಉದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ಮೋದಿ ನಂಟಿನ ಬಗ್ಗೆ ಪ್ರಶ್ನೆ ಮಾಡುತ್ತಲೇ ಇರುತ್ತೇನೆ ಎಂದು ಹೇಳಿದರು.
ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದರು.
ಮಾರ್ಚ್ 23ರಂದು ಗುಜರಾತ್ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಬಳಿಕ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಕಾರ್ಯಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿತ್ತು.
I'm standing up for the democratic rights of the people of India, and I'm not afraid.
— Congress (@INCIndia) March 25, 2023
These people don't understand me yet.
I remain committed to asking questions about the PM's connection to Adani. Their partnership has been long-standing and close.
: @RahulGandhi ji pic.twitter.com/SfmX415Pkt
ಇವನ್ನೂ ಓದಿ:
ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿ ಅಧಿಸೂಚನೆ
ಅಂದು ಕೋಲಾರದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?
ರಾಹುಲ್ ಗಾಂಧಿ ಪರ ದೆಹಲಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ
ಎರಡು ವರ್ಷ ಜೈಲುಶಿಕ್ಷೆಗೆ ವಿರೋಧ: ರಾಹುಲ್ಗೆ ವಿಪಕ್ಷಗಳ ಬೆಂಬಲ
ಬಿಜಿಪಿಯೇತರ ಮುಖಂಡರ ವಿರುದ್ಧ ಪಿತೂರಿ: ರಾಹುಲ್ಗೆ ಕೇಜ್ರಿವಾಲ್ ಬೆಂಬಲ
ಬೇರೆಯವರನ್ನು ನಿಂದಿಸಲು ರಾಹುಲ್ಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕೆ?: ರವಿಶಂಕರ್
ಮೋದಿ ಉಪನಾಮದ ವ್ಯಂಗ್ಯ: ರಾಹುಲ್ಗೆ 2 ವರ್ಷ ಸಜೆ
ಸತ್ಯ ಮಾತನಾಡಿದ್ದಕ್ಕಾಗಿ ರಾಹುಲ್ ಗಾಂಧಿಗೆ ಶಿಕ್ಷೆ: ಪ್ರಿಯಾಂಕಾ, ಖರ್ಗೆ ಕಿಡಿ
ಸತ್ಯವೇ ನನ್ನ ದೇವರು... ತೀರ್ಪಿನ ಬಳಿಕ ಗಾಂಧಿ ಹೇಳಿಕೆ ಉಲ್ಲೇಖಿಸಿದ ರಾಹುಲ್
‘ಮೋದಿ‘ ಉಪನಾಮಕ್ಕೆ ಅಪಮಾನ ಪ್ರಕರಣ: ರಾಹುಲ್ ಗಾಂಧಿ ತಪ್ಪಿತಸ್ಥ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.