ಚೆನ್ನೈ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಡಿಎಂಕೆ ಮತ್ತು ಅದರ ಮಿತ್ರ ಪಕ್ಷಗಳ ನಾಯಕರು ಉಪವಾಸದೊಂದಿಗೆ ಶುಕ್ರವಾರ ಒಂದು ದಿನ ಧರಣಿ ಕೈಗೊಂಡಿದ್ದಾರೆ.
ತಮಿಳುನಾಡಿನಲ್ಲಿ ಶುಕ್ರವಾರ ಡಿಎಂಕೆ ಮುಖ್ಯಸ್ಥ, ವಿರೋಧ ಪಕ್ಷದ ನಾಯಕ ಎಂ.ಕೆ.ಸ್ಟಾಲಿನ್, ಸಂಸದೆ ಕನಿಮೋಳಿ ಮತ್ತು ಮಿತ್ರ ಪಕ್ಷಗಳ ಮುಖಂಡರು ಧರಣಿಯಲ್ಲಿ ಭಾಗಿಯಾಗಿದ್ದಾರೆ. ದೆಹಲಿಯ ಗಡಿ ಪ್ರದೇಶದಲ್ಲಿ ಪಂಜಾಬ್, ಹರಿಯಾಣದ ರೈತರು ಪ್ರತಿಭಟಿಸುತ್ತಿದ್ದಾರೆ.