<p class="bodytext"><strong>ಚೆನ್ನೈ:</strong> ತಮಿಳುನಾಡಿನ ಡಿಎಂಕೆ ಸರ್ಕಾರವು ಶುಕ್ರವಾರ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ₹3 ತೆರಿಗೆ ಕಡಿತ ಮಾಡುವುದಾಗಿ ಘೋಷಿಸಿದೆ.</p>.<p class="bodytext">ಇಂಧನ ಬೆಲೆಯ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದಿರುವ ಡಿಎಂಕೆ ಸರ್ಕಾರ, ಗ್ರಾಹಕರಿಗೆ ಪರಿಹಾರ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ ಎಂದು ಹೇಳಿದೆ.</p>.<p class="bodytext">ಪ್ರಸಕ್ತ ಸಾಲಿನ ಪರಿಷ್ಕೃತ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದ ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಲಹೆ ಮೇರೆಗೆ ತೆರಿಗೆ ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಿಸಿದರು.</p>.<p class="bodytext">‘ಸರ್ಕಾರವು ಪೆಟ್ರೋಲ್ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್ಗೆ ₹3 ಕಡಿಮೆ ಮಾಡಲು ನಿರ್ಧರಿಸಿದೆ. ಆ ಮೂಲಕ ರಾಜ್ಯದ ಶ್ರಮಜೀವಿ ವರ್ಗದ ಜನರಿಗೆ ಪ್ರಮುಖ ಪರಿಹಾರ ನೀಡಿದೆ ಎಂದು ಸದನಕ್ಕೆ ತಿಳಿಸಲು ನನಗೆ ಸಂತೋಷವಾಗಿದೆ’ ಎಂದಿದ್ದಾರೆ ಪಳನಿವೇಲ್ ತ್ಯಾಗರಾಜನ್.</p>.<p class="bodytext">ಕೆಲವು ದಿನಗಳ ಹಿಂದೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಹೊರಡಿಸಿದ ಶ್ವೇತಪತ್ರದ ಬಗ್ಗೆ ಉಲ್ಲೇಖಿಸಿದ ಸಚಿವರು, ತೆರಿಗೆ ಕಡಿಮೆ ಮಾಡಿರುವುದರಿಂದ ರಾಜ್ಯ ಸರ್ಕಾರಕ್ಕೆ ₹1,160 ಕೋಟಿ ಆದಾಯ ನಷ್ಟವಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಚೆನ್ನೈ:</strong> ತಮಿಳುನಾಡಿನ ಡಿಎಂಕೆ ಸರ್ಕಾರವು ಶುಕ್ರವಾರ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ₹3 ತೆರಿಗೆ ಕಡಿತ ಮಾಡುವುದಾಗಿ ಘೋಷಿಸಿದೆ.</p>.<p class="bodytext">ಇಂಧನ ಬೆಲೆಯ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದಿರುವ ಡಿಎಂಕೆ ಸರ್ಕಾರ, ಗ್ರಾಹಕರಿಗೆ ಪರಿಹಾರ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ ಎಂದು ಹೇಳಿದೆ.</p>.<p class="bodytext">ಪ್ರಸಕ್ತ ಸಾಲಿನ ಪರಿಷ್ಕೃತ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದ ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಲಹೆ ಮೇರೆಗೆ ತೆರಿಗೆ ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಿಸಿದರು.</p>.<p class="bodytext">‘ಸರ್ಕಾರವು ಪೆಟ್ರೋಲ್ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್ಗೆ ₹3 ಕಡಿಮೆ ಮಾಡಲು ನಿರ್ಧರಿಸಿದೆ. ಆ ಮೂಲಕ ರಾಜ್ಯದ ಶ್ರಮಜೀವಿ ವರ್ಗದ ಜನರಿಗೆ ಪ್ರಮುಖ ಪರಿಹಾರ ನೀಡಿದೆ ಎಂದು ಸದನಕ್ಕೆ ತಿಳಿಸಲು ನನಗೆ ಸಂತೋಷವಾಗಿದೆ’ ಎಂದಿದ್ದಾರೆ ಪಳನಿವೇಲ್ ತ್ಯಾಗರಾಜನ್.</p>.<p class="bodytext">ಕೆಲವು ದಿನಗಳ ಹಿಂದೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಹೊರಡಿಸಿದ ಶ್ವೇತಪತ್ರದ ಬಗ್ಗೆ ಉಲ್ಲೇಖಿಸಿದ ಸಚಿವರು, ತೆರಿಗೆ ಕಡಿಮೆ ಮಾಡಿರುವುದರಿಂದ ರಾಜ್ಯ ಸರ್ಕಾರಕ್ಕೆ ₹1,160 ಕೋಟಿ ಆದಾಯ ನಷ್ಟವಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>