1938ರಲ್ಲಿ 14 ವರ್ಷದ ವಿದ್ಯಾರ್ಥಿಯಾಗಿದ್ದ ಕರುಣಾನಿಧಿ ಅವರು ವಿದ್ಯಾರ್ಥಿಗಳನ್ನು ಜೊತೆಗೂಡಿಸಿಕೊಂಡು ತಮ್ಮ ಹುಟ್ಟೂರು ತಿರುವಾರೂರು ಬೀದಿಗಳಲ್ಲಿ ಹಿಂದಿ ಹೇರಿಕೆಯ ವಿರುದ್ಧದ ಘೋಷಣೆಗಳನ್ನು ಮೊಳಗಿಸಿದ್ದರು. ಇದೇ ವಿಚಾರವನ್ನು ಇದೀಗ ಪ್ರಸ್ತಾಪಿಸಿರುವ ಡಿಎಂಕೆ,ತಮಿಳುನಾಡಿನ ಜನತೆ ಈ ಘಟನೆಯನ್ನು ಇನ್ನೂ ನೆನಪಿನಲ್ಲಿಟ್ಟುಕೊಂಡಿದ್ದಾರೆ ಎಂಬುದನ್ನು ಮರೆಯಬೇಡಿ. ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಮುಖವಾಣಿಯಲ್ಲಿ ಉಲ್ಲೇಖಿಸಿದೆ.