ತಿರುವರೂರು: 2021ರ ಚುನಾವಣೆಗೆ ಪೂರ್ವಭಾವಿಯಾಗಿ ಡಿಎಂಕೆಯ ಯುವ ಘಟಕ 75 ದಿನಗಳ ಅಭಿಯಾನವನ್ನು ಪ್ರಾರಂಭಿಸಿದೆ.
ಪಕ್ಷದ ಮುಖ್ಯಸ್ಥರಾಗಿದ್ದ ದಿವಂಗತ ಎಂ. ಕರುಣಾನಿಧಿ ಅವರ ಹುಟ್ಟೂರಾದ ತಿರುಕುವಲೈನಲ್ಲಿ ಈ ಅಭಿಯಾನಕ್ಕೆ ಯುವ ಘಟಕದ ಮುಖಂಡ ಉದಯನಿಧಿ ಸ್ಟಾಲಿನ್ ಚಾಲನೆ ನೀಡಿದರು.
ತಮಿಳುನಾಡಿನಲ್ಲಿ ಆವರಿಸಿರುವ ಕತ್ತಲೆಯನ್ನು ಕೊನೆಗಾಣಿಸುವ ಜೊತೆಗೆ ತಂದೆಯ ಸಂದೇಶವನ್ನು ರಾಜ್ಯದ ವಿವಿಧ ಭಾಗಗಳಿಗೆ ರವಾನಿಸುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ ಎಂದು ಉದಯನಿಧಿ ಟ್ವೀಟ್ ಮಾಡಿದ್ದಾರೆ.
ಮಹಿಳಾ ಮುಖಂಡರಾದ ಕನಿಮೊಳಿ, ಕೆ.ಪೊನ್ಮುಡಿ ಸೇರಿದಂತೆ 15 ಮುಖಂಡರು ರಾಜ್ಯದ ವಿವಿಧ ಭಾಗಗಳಿಗೆ ತೆರಳಿ ಆಡಳಿತಾರೂಢ ಪಕ್ಷದ ವೈಫಲ್ಯವನ್ನು ಜನರ ಮುಂದಿಡಲಿದ್ದಾರೆ. 1,500 ಸಭೆಗಳನ್ನು ನಡೆಸಲಿದ್ದಾರೆ ಎಂದು ಪಕ್ಷ ತಿಳಿಸಿದೆ.