<p><strong>ಚೆನ್ನೈ: ‘</strong>ರಾಜ್ಯಕ್ಕೆ ತಮಿಳುನಾಡು ಎನ್ನುವ ಬದಲು ತಮಿಳಗಂ ಎಂದು ಸಂಬೋಧಿಸುವುದೇ ಸೂಕ್ತ’ ಎಂದು ಹೇಳಿದ್ದ ರಾಜ್ಯಪಾಲ ಆರ್.ಎನ್.ರವಿ ಅವರು ಈ ಕುರಿತು ಬುಧವಾರ ಸ್ಪಷ್ಟನೆ ನೀಡಿದ್ದಾರೆ. ಅವರ ಸ್ಪಷ್ಟನೆಯನ್ನು ಆಡಳಿತಾರೂಢ ಡಿಎಂಕೆ, ಗುರುವಾರ ತಿರಸ್ಕರಿಸಿದೆ. </p>.<p>‘ಪ್ರತ್ಯೇಕ ರಾಷ್ಟ್ರಕ್ಕಾಗಿ ಡಿಎಂಕೆ ಹೋರಾಟ ನಡೆಸುತ್ತಿದೆ. ನಮ್ಮದು ದೇಶ ವಿಭಜಕ ಪಕ್ಷವೆಂದು ಬಿಂಬಿಸುವ ಉದ್ದೇಶದಿಂದಲೇ ರವಿ ಆ ರೀತಿ ಹೇಳಿಕೆ ನೀಡಿದ್ದರು’ ಎಂದು ಡಿಎಂಕೆ ವಕ್ತಾರ ಟಿ.ಕೆ.ಎಸ್.ಇಳಂಗೋವನ್ ಆರೋಪಿಸಿದ್ದಾರೆ.</p>.<p>‘ನಾವು ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಿಲ್ಲ. ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯಕ್ಕೆ ಹೆಚ್ಚಿನ ಅಧಿಕಾರ ಒದಗಿಸುವಂತೆ ಕೇಳಿದ್ದೇವೆ. ತಮಿಳುನಾಡು, ಅದರ ಸಂಸ್ಕೃತಿ ಹಾಗೂ ಭಾಷೆಯನ್ನು ಪ್ರಶ್ನಿಸುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ’ ಎಂದು ಅವರು ಹೇಳಿದ್ದಾರೆ.</p>.<p>‘ರಾಜ್ಯದ ಐತಿಹಾಸಿಕ ಸಂಸ್ಕೃತಿಯನ್ನು ಉಲ್ಲೇಖಿಸಿ ಮಾತನಾಡುವಾಗ ತಮಿಳಗಂ ಪದ ಪ್ರಯೋಗಿಸಿದ್ದೆ. ಇದಕ್ಕೆ ವಿವಾದದ ರೂಪ ನೀಡಲಾಯಿತು. ರಾಜ್ಯಪಾಲರು ‘ತಮಿಳುನಾಡು’ ಹೆಸರಿಗೆ ವಿರುದ್ಧವಾಗಿದ್ದಾರೆ ಎಂದು ಬಿಂಬಿಸಲಾಯಿತು. ವಿವಾದ ಹಾಗೂ ಗೊಂದಲಗಳಿಗೆ ತೆರೆ ಎಳೆಯುವ ಉದ್ದೇಶದಿಂದ ಸ್ಪಷ್ಟನೆ ನೀಡಿದ್ದೇನೆ’ ಎಂದು ರಾಜ್ಯಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದರು.</p>.<p><strong>ಡಿಎಂಕೆ ವಕ್ತಾರನ ಮೇಲೆ ಮಾನನಷ್ಟ ಮೊಕದ್ದಮ್ಮೆ </strong></p>.<p><strong>ಚೆನ್ನೈ: </strong>ತಮ್ಮ ವಿರುದ್ಧ ಮಾನಹಾನಿಕರ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿದ್ದ ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ರಾಜ್ಯಪಾಲ ರವಿ ಅವರು ಗುರುವಾರ ಮಾನನಷ್ಟ ಮೊಕದ್ದಮ್ಮೆ ದಾಖಲಿದ್ದಾರೆ.</p>.<p>ಕೃಷ್ಣಮೂರ್ತಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದು, ನ್ಯಾಯಾಲಯವು ಇದನ್ನು ಶೀಘ್ರವೇ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. </p>.<p>ಇದೇ 14ರಂದು ಮಾತನಾಡಿದ್ದ ಕೃಷ್ಣಮೂರ್ತಿ, ರಾಜ್ಯಪಾಲರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದರು. ಹೀಗಾಗಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: ‘</strong>ರಾಜ್ಯಕ್ಕೆ ತಮಿಳುನಾಡು ಎನ್ನುವ ಬದಲು ತಮಿಳಗಂ ಎಂದು ಸಂಬೋಧಿಸುವುದೇ ಸೂಕ್ತ’ ಎಂದು ಹೇಳಿದ್ದ ರಾಜ್ಯಪಾಲ ಆರ್.ಎನ್.ರವಿ ಅವರು ಈ ಕುರಿತು ಬುಧವಾರ ಸ್ಪಷ್ಟನೆ ನೀಡಿದ್ದಾರೆ. ಅವರ ಸ್ಪಷ್ಟನೆಯನ್ನು ಆಡಳಿತಾರೂಢ ಡಿಎಂಕೆ, ಗುರುವಾರ ತಿರಸ್ಕರಿಸಿದೆ. </p>.<p>‘ಪ್ರತ್ಯೇಕ ರಾಷ್ಟ್ರಕ್ಕಾಗಿ ಡಿಎಂಕೆ ಹೋರಾಟ ನಡೆಸುತ್ತಿದೆ. ನಮ್ಮದು ದೇಶ ವಿಭಜಕ ಪಕ್ಷವೆಂದು ಬಿಂಬಿಸುವ ಉದ್ದೇಶದಿಂದಲೇ ರವಿ ಆ ರೀತಿ ಹೇಳಿಕೆ ನೀಡಿದ್ದರು’ ಎಂದು ಡಿಎಂಕೆ ವಕ್ತಾರ ಟಿ.ಕೆ.ಎಸ್.ಇಳಂಗೋವನ್ ಆರೋಪಿಸಿದ್ದಾರೆ.</p>.<p>‘ನಾವು ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಿಲ್ಲ. ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯಕ್ಕೆ ಹೆಚ್ಚಿನ ಅಧಿಕಾರ ಒದಗಿಸುವಂತೆ ಕೇಳಿದ್ದೇವೆ. ತಮಿಳುನಾಡು, ಅದರ ಸಂಸ್ಕೃತಿ ಹಾಗೂ ಭಾಷೆಯನ್ನು ಪ್ರಶ್ನಿಸುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ’ ಎಂದು ಅವರು ಹೇಳಿದ್ದಾರೆ.</p>.<p>‘ರಾಜ್ಯದ ಐತಿಹಾಸಿಕ ಸಂಸ್ಕೃತಿಯನ್ನು ಉಲ್ಲೇಖಿಸಿ ಮಾತನಾಡುವಾಗ ತಮಿಳಗಂ ಪದ ಪ್ರಯೋಗಿಸಿದ್ದೆ. ಇದಕ್ಕೆ ವಿವಾದದ ರೂಪ ನೀಡಲಾಯಿತು. ರಾಜ್ಯಪಾಲರು ‘ತಮಿಳುನಾಡು’ ಹೆಸರಿಗೆ ವಿರುದ್ಧವಾಗಿದ್ದಾರೆ ಎಂದು ಬಿಂಬಿಸಲಾಯಿತು. ವಿವಾದ ಹಾಗೂ ಗೊಂದಲಗಳಿಗೆ ತೆರೆ ಎಳೆಯುವ ಉದ್ದೇಶದಿಂದ ಸ್ಪಷ್ಟನೆ ನೀಡಿದ್ದೇನೆ’ ಎಂದು ರಾಜ್ಯಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದರು.</p>.<p><strong>ಡಿಎಂಕೆ ವಕ್ತಾರನ ಮೇಲೆ ಮಾನನಷ್ಟ ಮೊಕದ್ದಮ್ಮೆ </strong></p>.<p><strong>ಚೆನ್ನೈ: </strong>ತಮ್ಮ ವಿರುದ್ಧ ಮಾನಹಾನಿಕರ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿದ್ದ ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ರಾಜ್ಯಪಾಲ ರವಿ ಅವರು ಗುರುವಾರ ಮಾನನಷ್ಟ ಮೊಕದ್ದಮ್ಮೆ ದಾಖಲಿದ್ದಾರೆ.</p>.<p>ಕೃಷ್ಣಮೂರ್ತಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದು, ನ್ಯಾಯಾಲಯವು ಇದನ್ನು ಶೀಘ್ರವೇ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. </p>.<p>ಇದೇ 14ರಂದು ಮಾತನಾಡಿದ್ದ ಕೃಷ್ಣಮೂರ್ತಿ, ರಾಜ್ಯಪಾಲರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದರು. ಹೀಗಾಗಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>