<p class="title"><strong>ಚೆನ್ನೈ: </strong>ಆರ್ಥಿಕವಾಗಿ ದುರ್ಬಲ ವರ್ಗದವರಿಗೆ(ಇಡಬ್ಲ್ಯುಎಸ್) ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿಯನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿತಮಿಳುನಾಡು ಆಡಳಿತಾರೂಢ ಡಿಎಂಕೆ ಮಂಗಳವಾರ ಹೇಳಿದೆ.</p>.<p class="title">ಈ ತೀರ್ಪಿಗೆ ಸಂಬಂಧಿಸಿ ಮುಂದಿನ ಕ್ರಮ ತೆಗೆದುಕೊಳ್ಳಲು ತಮಿಳುನಾಡು ಸರ್ಕಾರವು ಇದೇ 12ರಂದು ಸರ್ವಪಕ್ಷಗಳ ಸಭೆ ಕರೆದಿದೆ.</p>.<p class="bodytext">‘ಇಡಬ್ಲ್ಯುಎಸ್ ಮೀಸಲಾತಿಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರೋಧಿಯಾಗಿದೆ’ ಎಂದು ಸರ್ಕಾರದ ಪ್ರಕಟಣೆಯೊಂದರಲ್ಲಿ ಹೇಳಲಾಗಿದೆ.</p>.<p class="bodytext">ಸುದೀರ್ಘ ಸಾಮಾಜಿಕ ನ್ಯಾಯಕ್ಕಾಗಿ ಶತಮಾನಗಳ ಕಾಲ ದೇಶ ನಡೆಸಿದ ಹೋರಾಟಕ್ಕೆಇಡಬ್ಲ್ಯುಎಸ್ ಮೀಸಲಾತಿಯಿಂದ ಹಿನ್ನಡೆಯಾಗುತ್ತದೆ ಎಂದು ಈ ಹಿಂದೆ ಸ್ಟಾಲಿನ್ ಹೇಳಿದ್ದರು. ತಮಿಳುನಾಡು ಸರ್ಕಾರವುಶೇ 10ರಷ್ಟುಇಡಬ್ಲ್ಯುಎಸ್ ಮೀಸಲಾತಿಯನ್ನು ಜಾರಿಗೊಳಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚೆನ್ನೈ: </strong>ಆರ್ಥಿಕವಾಗಿ ದುರ್ಬಲ ವರ್ಗದವರಿಗೆ(ಇಡಬ್ಲ್ಯುಎಸ್) ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿಯನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿತಮಿಳುನಾಡು ಆಡಳಿತಾರೂಢ ಡಿಎಂಕೆ ಮಂಗಳವಾರ ಹೇಳಿದೆ.</p>.<p class="title">ಈ ತೀರ್ಪಿಗೆ ಸಂಬಂಧಿಸಿ ಮುಂದಿನ ಕ್ರಮ ತೆಗೆದುಕೊಳ್ಳಲು ತಮಿಳುನಾಡು ಸರ್ಕಾರವು ಇದೇ 12ರಂದು ಸರ್ವಪಕ್ಷಗಳ ಸಭೆ ಕರೆದಿದೆ.</p>.<p class="bodytext">‘ಇಡಬ್ಲ್ಯುಎಸ್ ಮೀಸಲಾತಿಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರೋಧಿಯಾಗಿದೆ’ ಎಂದು ಸರ್ಕಾರದ ಪ್ರಕಟಣೆಯೊಂದರಲ್ಲಿ ಹೇಳಲಾಗಿದೆ.</p>.<p class="bodytext">ಸುದೀರ್ಘ ಸಾಮಾಜಿಕ ನ್ಯಾಯಕ್ಕಾಗಿ ಶತಮಾನಗಳ ಕಾಲ ದೇಶ ನಡೆಸಿದ ಹೋರಾಟಕ್ಕೆಇಡಬ್ಲ್ಯುಎಸ್ ಮೀಸಲಾತಿಯಿಂದ ಹಿನ್ನಡೆಯಾಗುತ್ತದೆ ಎಂದು ಈ ಹಿಂದೆ ಸ್ಟಾಲಿನ್ ಹೇಳಿದ್ದರು. ತಮಿಳುನಾಡು ಸರ್ಕಾರವುಶೇ 10ರಷ್ಟುಇಡಬ್ಲ್ಯುಎಸ್ ಮೀಸಲಾತಿಯನ್ನು ಜಾರಿಗೊಳಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>