ಪ್ರಕರಣವೇನು?: ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ ಬಳಿಕ, ಶೋಪಿಯಾನ್ನ ಸೇಬಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ತಮ್ಮ ಕುಟುಂಬದ ಸದಸ್ಯರು ಕಾಣೆಯಾಗಿದ್ದಾರೆ ಎಂದು, ರಜೌರಿಯಲ್ಲಿ ಮೂರು ಕುಟುಂಬಗಳು ಪೊಲೀಸರಿಗೆ ದೂರು ನೀಡಿದ್ದವು. ಬ್ರಾರ್ ಅಹ್ಮದ್ ಖಾನ್ (18), ಇಮ್ತಿಯಾಜ್ ಹುಸೈನ್ (26) ಹಾಗೂ ಮೊಹಮ್ಮದ್ ಇಬ್ರಾರ್ (21) ಕಾಣೆಯಾದವರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ನಂತರದಲ್ಲಿ ಈ ಪ್ರಕರಣ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಅಪರಿಚಿತ ಶಂಕಿತ ಉಗ್ರರ ಡಿಎನ್ಎ ಜೊತೆ ಹೋಲಿಸಲು, ಕುಟುಂಬ ಸದಸ್ಯರ ಡಿಎನ್ಎ ಮಾದರಿಯನ್ನು ಆ.13ರಂದು ಪಡೆಯಲಾಗಿತ್ತು.