<p><strong>ನವದೆಹಲಿ</strong>: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಎನ್ಸಿಪಿ ಮುಖಂಡ ಶರದ್ ಪವಾರ್ ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದಾರೆ.</p>.<p>ಈ ಬಗ್ಗೆ ಶುಕ್ರವಾರ ಮಾತನಾಡಿರುವ ಅವರು, 'ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರವು ಸಮಯೋಚಿತ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ, ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ದೇಶದ ಇತರೆಡೆಯೂ ಹರಡಬಹುದು' ಎಂದು ತಿಳಿಸಿದ್ದಾರೆ.</p>.<p>ಕೃಷಿ ಮಸೂದೆಗಳ ಬಗೆಗಿನ ದೀರ್ಘ ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸಿದರೂ ಕೇಂದ್ರ ಸರ್ಕಾರ ಕಿವಿಗೊಡಲಿಲ್ಲ. ಸಂಸತ್ನಲ್ಲಿ ಮಸೂದೆಗಳನ್ನು ಅವಸರವಾಗಿ ಅಂಗೀಕರಿಸಲಾಯಿತು ಎಂದು ಶರದ್ ಪವಾರ್ ಆರೋಪಿಸಿದ್ದಾರೆ.</p>.<p>'ರೈತರು ಈ ದೇಶದ ಅನ್ನದಾತರು ಎಂಬುದನ್ನು ನಾವು ಮರೆಯಬಾರದು. ಅವರ ತಾಳ್ಮೆಯನ್ನು ಕೇಂದ್ರ ಸರ್ಕಾರ ಪರೀಕ್ಷಿಸಬಾರದು' ಎಂದು ಅವರು ಹೇಳಿದ್ದಾರೆ.</p>.<p>ಎನ್ಸಿಪಿ ಮುಖಂಡ ಶರದ್ ಪವಾರ್ ಅವರು ಕೇಂದ್ರದ ಕೃಷಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.</p>.<p>ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ತಂದಿರುವ ಹೊಸ ಕಾಯ್ದೆಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ರೈತರು ‘ದೆಹಲಿ ಚಲೊ’ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಎನ್ಸಿಪಿ ಮುಖಂಡ ಶರದ್ ಪವಾರ್ ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದಾರೆ.</p>.<p>ಈ ಬಗ್ಗೆ ಶುಕ್ರವಾರ ಮಾತನಾಡಿರುವ ಅವರು, 'ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರವು ಸಮಯೋಚಿತ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ, ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ದೇಶದ ಇತರೆಡೆಯೂ ಹರಡಬಹುದು' ಎಂದು ತಿಳಿಸಿದ್ದಾರೆ.</p>.<p>ಕೃಷಿ ಮಸೂದೆಗಳ ಬಗೆಗಿನ ದೀರ್ಘ ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸಿದರೂ ಕೇಂದ್ರ ಸರ್ಕಾರ ಕಿವಿಗೊಡಲಿಲ್ಲ. ಸಂಸತ್ನಲ್ಲಿ ಮಸೂದೆಗಳನ್ನು ಅವಸರವಾಗಿ ಅಂಗೀಕರಿಸಲಾಯಿತು ಎಂದು ಶರದ್ ಪವಾರ್ ಆರೋಪಿಸಿದ್ದಾರೆ.</p>.<p>'ರೈತರು ಈ ದೇಶದ ಅನ್ನದಾತರು ಎಂಬುದನ್ನು ನಾವು ಮರೆಯಬಾರದು. ಅವರ ತಾಳ್ಮೆಯನ್ನು ಕೇಂದ್ರ ಸರ್ಕಾರ ಪರೀಕ್ಷಿಸಬಾರದು' ಎಂದು ಅವರು ಹೇಳಿದ್ದಾರೆ.</p>.<p>ಎನ್ಸಿಪಿ ಮುಖಂಡ ಶರದ್ ಪವಾರ್ ಅವರು ಕೇಂದ್ರದ ಕೃಷಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.</p>.<p>ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ತಂದಿರುವ ಹೊಸ ಕಾಯ್ದೆಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ರೈತರು ‘ದೆಹಲಿ ಚಲೊ’ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>