<p><strong>ನವದೆಹಲಿ</strong>: ಕೋವಿಡ್ ಪಿಡುಗು ನಿರ್ವಹಣೆಗೆ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ಸರ್ಕಾರದ ನಿರ್ದಯತೆ ಮತ್ತು ಕೋವಿಡ್ನಿಂದ ವೈದ್ಯರನ್ನು ರಕ್ಷಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.</p>.<p>ಕೋವಿಡ್–19 ರೋಗ ಹರಡುವಿಕೆಯ ತಪಾಸಣೆ ಮತ್ತು ಲಸಿಕಾ ಅಭಿಯಾನದಲ್ಲಿ ಸರ್ಕಾರ ಅನುಸರಿಸುತ್ತಿರುವ ನೀತಿಗಳನ್ನು ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಟೀಕಿಸಿದ್ದಾರೆ.</p>.<p>‘ವೈದ್ಯರಿಗೆ ಕೊರೊನಾ ವೈರಸ್ ಮತ್ತು ಬಿಜೆಪಿ ಸರ್ಕಾರದ ನಿರ್ದಯತೆಯಿಂದ ರಕ್ಷಣೆ ಬೇಕು. ಸಂರಕ್ಷಕರನ್ನು ಉಳಿಸಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ಕೋವಿಡ್ ಲಸಿಕೆಗಳ ಬಗ್ಗೆ ಎಲ್ಲಾ ರಾಜ್ಯಗಳು ಒಮ್ಮತದ ಧ್ವನಿಯಲ್ಲಿ ಮಾತನಾಡುವಂತೆ ಮನವಿ ಮಾಡಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ವಿರುದ್ಧಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಾಗ್ದಾಳಿ ಮಾಡಿದ್ದಾರೆ.</p>.<p>‘ಲಸಿಕೆ ಸಮಸ್ಯೆಯನ್ನು ಕೇಂದ್ರ ವರ್ಸಸ್ ರಾಜ್ಯಗಳು ಎಂದು ಮಾಡಿದವರು ಯಾರು? ಕೇಂದ್ರ ಸರ್ಕಾರವು 18ರಿಂದ 44 ವರ್ಷ ವಯಸ್ಸಿನವರಿಗೆ ಲಸಿಕೆ ನೀಡುವುದನ್ನು ಕೈಬಿಡುವಂತೆ ಏಕಪಕ್ಷೀಯವಾಗಿ ನಿರ್ಧರಿಸಿದವರು ಯಾರು? ಈ ನೀತಿಯನ್ನು ರೂಪಿಸುವ ಮೊದಲು ರಾಜ್ಯಗಳ ಜತೆ ಏಕೆ ಸಮಾಲೋಚಿಸಲಿಲ್ಲ? ಈ ಪ್ರಶ್ನೆಗಳನ್ನು ನೀವು ಪ್ರಧಾನಿಗೆ ಏಕೆ ಕೇಳಬಾರದು? ಎಂದು ಜೈರಾಮ್ ರಮೇಶ್, ಜಗನ್ ವಿರುದ್ಧ ಹರಿಹಾಯ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್ ಪಿಡುಗು ನಿರ್ವಹಣೆಗೆ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ಸರ್ಕಾರದ ನಿರ್ದಯತೆ ಮತ್ತು ಕೋವಿಡ್ನಿಂದ ವೈದ್ಯರನ್ನು ರಕ್ಷಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.</p>.<p>ಕೋವಿಡ್–19 ರೋಗ ಹರಡುವಿಕೆಯ ತಪಾಸಣೆ ಮತ್ತು ಲಸಿಕಾ ಅಭಿಯಾನದಲ್ಲಿ ಸರ್ಕಾರ ಅನುಸರಿಸುತ್ತಿರುವ ನೀತಿಗಳನ್ನು ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಟೀಕಿಸಿದ್ದಾರೆ.</p>.<p>‘ವೈದ್ಯರಿಗೆ ಕೊರೊನಾ ವೈರಸ್ ಮತ್ತು ಬಿಜೆಪಿ ಸರ್ಕಾರದ ನಿರ್ದಯತೆಯಿಂದ ರಕ್ಷಣೆ ಬೇಕು. ಸಂರಕ್ಷಕರನ್ನು ಉಳಿಸಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ಕೋವಿಡ್ ಲಸಿಕೆಗಳ ಬಗ್ಗೆ ಎಲ್ಲಾ ರಾಜ್ಯಗಳು ಒಮ್ಮತದ ಧ್ವನಿಯಲ್ಲಿ ಮಾತನಾಡುವಂತೆ ಮನವಿ ಮಾಡಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ವಿರುದ್ಧಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಾಗ್ದಾಳಿ ಮಾಡಿದ್ದಾರೆ.</p>.<p>‘ಲಸಿಕೆ ಸಮಸ್ಯೆಯನ್ನು ಕೇಂದ್ರ ವರ್ಸಸ್ ರಾಜ್ಯಗಳು ಎಂದು ಮಾಡಿದವರು ಯಾರು? ಕೇಂದ್ರ ಸರ್ಕಾರವು 18ರಿಂದ 44 ವರ್ಷ ವಯಸ್ಸಿನವರಿಗೆ ಲಸಿಕೆ ನೀಡುವುದನ್ನು ಕೈಬಿಡುವಂತೆ ಏಕಪಕ್ಷೀಯವಾಗಿ ನಿರ್ಧರಿಸಿದವರು ಯಾರು? ಈ ನೀತಿಯನ್ನು ರೂಪಿಸುವ ಮೊದಲು ರಾಜ್ಯಗಳ ಜತೆ ಏಕೆ ಸಮಾಲೋಚಿಸಲಿಲ್ಲ? ಈ ಪ್ರಶ್ನೆಗಳನ್ನು ನೀವು ಪ್ರಧಾನಿಗೆ ಏಕೆ ಕೇಳಬಾರದು? ಎಂದು ಜೈರಾಮ್ ರಮೇಶ್, ಜಗನ್ ವಿರುದ್ಧ ಹರಿಹಾಯ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>