ಬೀದರ್: ‘ಅಯೋಧ್ಯೆಯಲ್ಲಿ ಐದು ಎಕರೆ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಹೊಸ ಬಾಬರಿ ಮಸೀದಿಗೆ ಯಾರೊಬ್ಬರೂ ದೇಣಿಗೆ ನೀಡಬಾರದು. ಬದಲಾಗಿ, ಬಡವರು, ಅನಾಥರ ಮದುವೆಗೆ ದೇಣಿಗೆ ಕೊಡಿ’ ಎಂದು ಆಲ್ ಇಂಡಿಯಾ ಮಜ್ಲೀಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದ ಅಧ್ಯಕ್ಷ, ಸಂಸದ ಅಸಾದುದ್ದೀನ್ ಒವೈಸಿ ಮನವಿ ಮಾಡಿದರು.