<p><strong>ಬೆಂಗಳೂರು</strong>: ‘ಕೊರೊನಾವೈರಸ್ನ ರೂಪಾಂತರಿ ತಳಿಯಾದ ಓಮೈಕ್ರಾನ್ ಜನಸಮುದಾಯದಲ್ಲಿ ವ್ಯಾಪಕವಾಗಿ ಹರಡಬಹುದು. ಆದರೆ, ಅದು ಮಾರಕ ಅಲ್ಲ, ಅದರ ಬಗ್ಗೆ ಆತಂಕಗೊಳ್ಳುವ ಅವಶ್ಯಕತೆ ಇಲ್ಲ’ ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲೂಎಚ್ಒ) ಮುಖ್ಯ ವಿಜ್ಞಾನಿ ಡಾ. ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.</p>.<p>ಓಮೈಕ್ರಾನ್ ಅಲೆ ಬಗ್ಗೆಎನ್ಡಿಟಿವಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.</p>.<p>‘ಓಮೈಕ್ರಾನ್ ಅಲೆ ವ್ಯಾಪಕವಾಗಿ ಹರಡಬಹುದು. ಇದರಿಂದ ಅನೇಕರು ಬಳಲಬಹುದು. ಆದರೆ, ಬಹುತೇಕರು ಮನೆಯಲ್ಲಿಯೇ ಚಿಕಿತ್ಸೆ ಮಾಡಿಕೊಳ್ಳಬಹುದು. ಹೀಗಿದ್ದರೂ ಇದನ್ನು ನಿರ್ಲಕ್ಷಿಸುವ ಹಾಗಿಲ್ಲ, ಕೆಲ ಪ್ರಕರಣಗಳಲ್ಲಿ ಮಾತ್ರ ವೈದ್ಯರ ತಪಾಸಣೆ ಅಗತ್ಯ’ ಎಂದು ಹೇಳಿದ್ದಾರೆ.</p>.<p><a href="https://www.prajavani.net/karnataka-news/covid-coronavirus-lockdown-karnataka-basavaraj-bommai-omicron-898569.html" itemprop="url">ಕೋವಿಡ್ ನಿಯಂತ್ರಣ ಕುರಿತು ತಜ್ಞರ ಜೊತೆ ಮಂಗಳವಾರ ಸಭೆ– ಸಿಎಂ ಬಸವರಾಜ ಬೊಮ್ಮಾಯಿ </a></p>.<p>‘ಓಮೈಕ್ರಾನ್ಗೆ ತುತ್ತಾಗುವವರಿಗೆ ಆಸ್ಪತ್ರೆಯ ಉನ್ನತ ಮಟ್ಟದ ಚಿಕಿತ್ಸೆಗಳು ಬೇಕಾಗಿಲ್ಲ. ಮನೆಯಲ್ಲಿ ಅಥವಾ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಲ್ಲಿ ಚಿಕಿತ್ಸೆ ಮಾಡಿಕೊಳ್ಳಲು ಅನುವು ಮಾಡಿಕೊಡಬೇಕು. ಬಹುಶಃ ಟೆಲಿ ಮೆಡಿಷನ್ ಸೇವೆಯನ್ನು ತ್ವರಿತಗೊಳಿಸಲು ಇದು ಉತ್ತಮ ಸಮಯ’ ಎಂದು ಅವರು ಹೇಳಿದ್ದಾರೆ.</p>.<p>‘ಓಮೈಕ್ರಾನ್ ಬಗ್ಗೆ ಜನ ಹೆದರಿಕೊಳ್ಳುವಂತದ್ದು ಏನೂ ಇಲ್ಲ. ಸಾಮಾನ್ಯವಾಗಿ ನೆಗಡಿಯ ಲಕ್ಷಣಗಳನ್ನು ಇದು ಹೊಂದಿರುತ್ತದೆ ಎಂಬುದನ್ನು ನಾವು ಈಗಾಗಲೇ ನಮ್ಮ ಅಧ್ಯಯನ ಹಾಗೂ ವಿಶ್ಲೇಷಣೆಗಳಲ್ಲಿ ಕಂಡುಕೊಂಡಿದ್ದೇವೆ’ ಎಂದು ಅವರು ಹೇಳಿದ್ದಾರೆ.</p>.<p>‘ಬ್ರಿಟನ್ ಹಾಗೂ ದಕ್ಷಿಣ ಆಫ್ರಿಕಾದಲ್ಲಿನ ಓಮೈಕ್ರಾನ್ಗೆ ಸಂಬಂಧಿಸಿದ ಅಂಕಿ–ಅಂಶಗಳನ್ನು ಪರಿಶೀಲಿಸಿದಾಗ ಇದು ಡೆಲ್ಟಾ ತಳಿಗಿಂತಲೂ ನಾಲ್ಕು ಪಟ್ಟು ಹೆಚ್ಚು ಹರಡುವ ಸಾಮರ್ಥ್ಯ ಹೊಂದಿದೆ’ ಎಂದುಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.</p>.<p><a href="https://www.prajavani.net/india-news/iit-k-prof-says-third-wave-will-end-in-april-898581.html" itemprop="url">3ನೇ ಅಲೆ: ಜನವರಿಗೆ ಶುರು, ಮಾರ್ಚ್ನಲ್ಲಿ ಉತ್ತುಂಗ, ಏಪ್ರಿಲ್ಗೆ ಅಂತ್ಯ– ತಜ್ಞರು </a></p>.<p>‘ಅದಾಗೂ ಓಮೈಕ್ರಾನ್ ಸೋಂಕು ನಿಯಂತ್ರಣಕ್ಕಾಗಿ ಹೆಲ್ತ್ಕೇರ್ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಸರ್ಕಾರಗಳು ಹಿಂದೆ ಬೀಳಬಾರದು’ ಎಂದು ಅವರು ಎಚ್ಚರಿಸಿದ್ದಾರೆ.</p>.<p>ಡಾ.ಸೌಮ್ಯಾ ಅವರು ಚೆನ್ನೈ ಮೂಲದವರಾಗಿದ್ದು, ಆರೋಗ್ಯ ಸೇವೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಇವರು ಭಾರತದ ಹಸಿರು ಕ್ರಾಂತಿಯ ಹರಿಕಾರ ಎಂದು ಖ್ಯಾತರಾಗಿರುವ ಡಾ. ಎಂ.ಎಸ್.ಸ್ವಾಮಿನಾಥನ್ ಅವರ ಮಗಳು.</p>.<p>ಭಾರತದಲ್ಲಿ ಇಲ್ಲಿಯವರೆಗೆ 1200 ಕ್ಕೂ ಹೆಚ್ಚು ಓಮೈಕ್ರಾನ್ ಪ್ರಕರಣಗಳು ವರದಿಯಾಗಿವೆ.</p>.<p><a href="https://www.prajavani.net/karnataka-news/covid-cases-jump-130-percent-in-karnataka-over-one-week-898572.html" itemprop="url">ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಒಂದೇ ವಾರದಲ್ಲಿ ಶೇ 130ರಷ್ಟು ಏರಿಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೊರೊನಾವೈರಸ್ನ ರೂಪಾಂತರಿ ತಳಿಯಾದ ಓಮೈಕ್ರಾನ್ ಜನಸಮುದಾಯದಲ್ಲಿ ವ್ಯಾಪಕವಾಗಿ ಹರಡಬಹುದು. ಆದರೆ, ಅದು ಮಾರಕ ಅಲ್ಲ, ಅದರ ಬಗ್ಗೆ ಆತಂಕಗೊಳ್ಳುವ ಅವಶ್ಯಕತೆ ಇಲ್ಲ’ ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲೂಎಚ್ಒ) ಮುಖ್ಯ ವಿಜ್ಞಾನಿ ಡಾ. ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.</p>.<p>ಓಮೈಕ್ರಾನ್ ಅಲೆ ಬಗ್ಗೆಎನ್ಡಿಟಿವಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.</p>.<p>‘ಓಮೈಕ್ರಾನ್ ಅಲೆ ವ್ಯಾಪಕವಾಗಿ ಹರಡಬಹುದು. ಇದರಿಂದ ಅನೇಕರು ಬಳಲಬಹುದು. ಆದರೆ, ಬಹುತೇಕರು ಮನೆಯಲ್ಲಿಯೇ ಚಿಕಿತ್ಸೆ ಮಾಡಿಕೊಳ್ಳಬಹುದು. ಹೀಗಿದ್ದರೂ ಇದನ್ನು ನಿರ್ಲಕ್ಷಿಸುವ ಹಾಗಿಲ್ಲ, ಕೆಲ ಪ್ರಕರಣಗಳಲ್ಲಿ ಮಾತ್ರ ವೈದ್ಯರ ತಪಾಸಣೆ ಅಗತ್ಯ’ ಎಂದು ಹೇಳಿದ್ದಾರೆ.</p>.<p><a href="https://www.prajavani.net/karnataka-news/covid-coronavirus-lockdown-karnataka-basavaraj-bommai-omicron-898569.html" itemprop="url">ಕೋವಿಡ್ ನಿಯಂತ್ರಣ ಕುರಿತು ತಜ್ಞರ ಜೊತೆ ಮಂಗಳವಾರ ಸಭೆ– ಸಿಎಂ ಬಸವರಾಜ ಬೊಮ್ಮಾಯಿ </a></p>.<p>‘ಓಮೈಕ್ರಾನ್ಗೆ ತುತ್ತಾಗುವವರಿಗೆ ಆಸ್ಪತ್ರೆಯ ಉನ್ನತ ಮಟ್ಟದ ಚಿಕಿತ್ಸೆಗಳು ಬೇಕಾಗಿಲ್ಲ. ಮನೆಯಲ್ಲಿ ಅಥವಾ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಲ್ಲಿ ಚಿಕಿತ್ಸೆ ಮಾಡಿಕೊಳ್ಳಲು ಅನುವು ಮಾಡಿಕೊಡಬೇಕು. ಬಹುಶಃ ಟೆಲಿ ಮೆಡಿಷನ್ ಸೇವೆಯನ್ನು ತ್ವರಿತಗೊಳಿಸಲು ಇದು ಉತ್ತಮ ಸಮಯ’ ಎಂದು ಅವರು ಹೇಳಿದ್ದಾರೆ.</p>.<p>‘ಓಮೈಕ್ರಾನ್ ಬಗ್ಗೆ ಜನ ಹೆದರಿಕೊಳ್ಳುವಂತದ್ದು ಏನೂ ಇಲ್ಲ. ಸಾಮಾನ್ಯವಾಗಿ ನೆಗಡಿಯ ಲಕ್ಷಣಗಳನ್ನು ಇದು ಹೊಂದಿರುತ್ತದೆ ಎಂಬುದನ್ನು ನಾವು ಈಗಾಗಲೇ ನಮ್ಮ ಅಧ್ಯಯನ ಹಾಗೂ ವಿಶ್ಲೇಷಣೆಗಳಲ್ಲಿ ಕಂಡುಕೊಂಡಿದ್ದೇವೆ’ ಎಂದು ಅವರು ಹೇಳಿದ್ದಾರೆ.</p>.<p>‘ಬ್ರಿಟನ್ ಹಾಗೂ ದಕ್ಷಿಣ ಆಫ್ರಿಕಾದಲ್ಲಿನ ಓಮೈಕ್ರಾನ್ಗೆ ಸಂಬಂಧಿಸಿದ ಅಂಕಿ–ಅಂಶಗಳನ್ನು ಪರಿಶೀಲಿಸಿದಾಗ ಇದು ಡೆಲ್ಟಾ ತಳಿಗಿಂತಲೂ ನಾಲ್ಕು ಪಟ್ಟು ಹೆಚ್ಚು ಹರಡುವ ಸಾಮರ್ಥ್ಯ ಹೊಂದಿದೆ’ ಎಂದುಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.</p>.<p><a href="https://www.prajavani.net/india-news/iit-k-prof-says-third-wave-will-end-in-april-898581.html" itemprop="url">3ನೇ ಅಲೆ: ಜನವರಿಗೆ ಶುರು, ಮಾರ್ಚ್ನಲ್ಲಿ ಉತ್ತುಂಗ, ಏಪ್ರಿಲ್ಗೆ ಅಂತ್ಯ– ತಜ್ಞರು </a></p>.<p>‘ಅದಾಗೂ ಓಮೈಕ್ರಾನ್ ಸೋಂಕು ನಿಯಂತ್ರಣಕ್ಕಾಗಿ ಹೆಲ್ತ್ಕೇರ್ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಸರ್ಕಾರಗಳು ಹಿಂದೆ ಬೀಳಬಾರದು’ ಎಂದು ಅವರು ಎಚ್ಚರಿಸಿದ್ದಾರೆ.</p>.<p>ಡಾ.ಸೌಮ್ಯಾ ಅವರು ಚೆನ್ನೈ ಮೂಲದವರಾಗಿದ್ದು, ಆರೋಗ್ಯ ಸೇವೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಇವರು ಭಾರತದ ಹಸಿರು ಕ್ರಾಂತಿಯ ಹರಿಕಾರ ಎಂದು ಖ್ಯಾತರಾಗಿರುವ ಡಾ. ಎಂ.ಎಸ್.ಸ್ವಾಮಿನಾಥನ್ ಅವರ ಮಗಳು.</p>.<p>ಭಾರತದಲ್ಲಿ ಇಲ್ಲಿಯವರೆಗೆ 1200 ಕ್ಕೂ ಹೆಚ್ಚು ಓಮೈಕ್ರಾನ್ ಪ್ರಕರಣಗಳು ವರದಿಯಾಗಿವೆ.</p>.<p><a href="https://www.prajavani.net/karnataka-news/covid-cases-jump-130-percent-in-karnataka-over-one-week-898572.html" itemprop="url">ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಒಂದೇ ವಾರದಲ್ಲಿ ಶೇ 130ರಷ್ಟು ಏರಿಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>