ನವದೆಹಲಿ: ಮಹಿಳೆಯರ ವಿರುದ್ಧ ದೌರ್ಜನ್ಯ, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಬಾರದು ಎಂದು ನಿರ್ಭಯ ಜ್ಯೋತಿ ಟ್ರಸ್ಟ್ ಒತ್ತಾಯಿಸಿದೆ.
2012ರಲ್ಲಿ ದೆಹಲಿಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬವು ಈ ಟ್ರಸ್ಟ್ ಸ್ಥಾಪಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ಟ್ರಸ್ಟ್, ರಾಜಕೀಯ ಪಕ್ಷಗಳು ತಮ್ಮ ವೋಟ್ ಬ್ಯಾಂಕ್ ಕುರಿತು ಗಮನಹರಿಸದೇ ಶುದ್ಧ ಚಾರಿತ್ರ್ಯ ಹೊಂದಿರುವ ಅಭ್ಯರ್ಥಿಗಳನ್ನು ಚುನಾವಣೆಗೆ ಕಣಕ್ಕಿಳಿಸಬೇಕು ಎಂದೂ ಮನವಿ ಮಾಡಿದೆ.