ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಷಣ್ ಅವರನ್ನು ಈಗಾಗಲೇ ದೋಷಿ ಎಂದು ಘೋಷಿಸಲಾಗಿದೆ. ಆದಾಗ್ಯೂತಾವು ನ್ಯಾಯಾಂಗದ ವಿರುದ್ಧ ಮಾಡಿರುವ ಟ್ವೀಟ್ಗಳ ಬಗೆಗಿನ ನಿಲುವನ್ನು ಮತ್ತೊಮ್ಮೆ ಪರಾಮರ್ಶಿಸುವಂತೆ ಇಂದು ಮಧ್ಯಾಹ್ನ 30 ನಿಮಿಷಗಳ ಕಾಲಾವಕಾಶ ನೀಡಲಾಗಿತ್ತು. ಆದರೆ, ಭೂಷಣ್ ತಮ್ಮಟ್ವೀಟ್ಗಳ ಬಗ್ಗೆ ಕ್ಷಮೆ ಯಾಚಿಸುವುದಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅವರಿಗೆ ಶಿಕ್ಷೆಯಾಗುವುದು ಖಾತ್ರಿಯಾಗಿದೆ.