<p><strong>ನವದೆಹಲಿ: ‘ಪ್ರ</strong>ಸ್ತುತ ಉತ್ತಮ ನ್ಯಾಯಮೂರ್ತಿಗಳ ಅಗತ್ಯವಿದೆ. ನ್ಯಾಯಮೂರ್ತಿಗಳು ಹೆಚ್ಚಿದ್ದರೆ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಲಿವೆ ಎಂದರ್ಥವಲ್ಲ.ಪ್ರಕರಣಗಳು ಬಾಕಿ ಉಳಿದಿರುವುದಕ್ಕೆ ನ್ಯಾಯಮೂರ್ತಿಗಳ ಸಂಖ್ಯೆಯನ್ನು ದುಪ್ಟಟ್ಟುಗೊಳಿಸುವುದೇ ಪರಿಹಾರವಾಗುವುದಿಲ್ಲ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>‘ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡುವುದೂ ಈಗ ಕಷ್ಟವಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>‘ಖಾಲಿ ಇರುವ ಸ್ಥಾನಗಳಿಗೆ ನ್ಯಾಯಮೂರ್ತಿಗಳ ಭರ್ತಿಗೆ ಪ್ರಯತ್ನಿಸಿ. ಅದು, ಎಷ್ಟು ಕಷ್ಟದ ಕೆಲಸ ಎಂದು ನಿಮಗೇ ಅರಿವಾಗುತ್ತದೆ. ಅಲಹಾಬಾದ್ ಹೈಕೋರ್ಟ್ನಲ್ಲಿ 160 ಸ್ಥಾನಗಳನ್ನು ಭರ್ತಿ ಮಾಡುವುದೇ ಕಷ್ಟವಾಗಿದೆ. 320 ಮಂದಿ ನೇಮಕ ಮಾಡಬೇಕು ಎಂದು ಅರ್ಜಿದಾರರು ಕೋರುತ್ತಿದ್ದಾರೆ’ ಎಂದು ಪೀಠ ಹೇಳಿತು.</p>.<p>ನ್ಯಾಯಮೂರ್ತಿಗಳ ಸಂಖ್ಯೆ ದ್ವಿಗುಣಗೊಳಿಸಲು ಕೋರಿ ಅರ್ಜಿ ಸಲ್ಲಿಸಿದ್ದ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು, ‘ವಿವಿಧ ಕೋರ್ಟ್ಗಳಲ್ಲಿ 5 ಕೋಟಿ ಪ್ರಕರಣಗಳು ಬಾಕಿ ಇವೆ. ಸುಮಾರು 20 ಕೋಟಿ ಜನರು ಬಾಧಿತರಾಗಿದ್ದಾರೆ. ಇದು, ಅಮೆರಿಕದ ಜನಸಂಖ್ಯೆಗೆ ಸಮಾನವಾದುದು’ ಎಂದು ಪ್ರತಿಪಾದಿಸಿದ್ದರು.</p>.<p>‘ಈಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು, ‘ಆರು ತಿಂಗಳಲ್ಲಿ ಎಲ್ಲ ಪ್ರಕರಣಗಳನ್ನು ವಿಲೇವಾರಿ ಮಾಡಿ ಎಂದು ಸಂಸತ್ತು ಕಾಯ್ದೆಯನ್ನು ರೂಪಿಸಿದಂತಿದೆ’ ಎಂದು ಅಭಿಪ್ರಾಯಪಟ್ಟಿತು.</p>.<p>’ನೀವು ಬಾಂಬೆ ಹೈಕೋರ್ಟ್ ಗಮನಿಸಿದ್ದೀರಾ? ಮೂಲಸೌಲಭ್ಯ ಕೊರತೆಯಿಂದ ಅಲ್ಲಿ ಒಬ್ಬ ನ್ಯಾಯಮೂರ್ತಿ ಹೆಚ್ಚುವರಿ ಸೇರ್ಪಡೆ ಆಗಿಲ್ಲ’. ಎಂದು ಪೀಠ ಅರ್ಜಿದಾರರಿಗೆ ತಿಳಿಸಿತು.</p>.<p>ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನಿರಾಕರಿಸಿದ ಪೀಠವು,ಇಂಥ ಪಿಐಎಲ್ ಸಲ್ಲಿಸಿದ ಸಂದರ್ಭದಲ್ಲಿ ನ್ಯಾಯಾಲಯದ ಸಮಯ ಪೋಲು ಮಾಡಿದ್ದಕ್ಕಾಗಿ ದಂಡ ವಿಧಿಸಬಹುದಾಗಿದೆ ಎಂದು ಹೇಳಿತು. ‘ಪ್ರತಿ ಸಮಸ್ಯೆಗೂ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಬೇಕೆಂದೇನೂ ಇಲ್ಲ’ ಎಂದೂ ಅಭಿಪ್ರಾಯಪಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ‘ಪ್ರ</strong>ಸ್ತುತ ಉತ್ತಮ ನ್ಯಾಯಮೂರ್ತಿಗಳ ಅಗತ್ಯವಿದೆ. ನ್ಯಾಯಮೂರ್ತಿಗಳು ಹೆಚ್ಚಿದ್ದರೆ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಲಿವೆ ಎಂದರ್ಥವಲ್ಲ.ಪ್ರಕರಣಗಳು ಬಾಕಿ ಉಳಿದಿರುವುದಕ್ಕೆ ನ್ಯಾಯಮೂರ್ತಿಗಳ ಸಂಖ್ಯೆಯನ್ನು ದುಪ್ಟಟ್ಟುಗೊಳಿಸುವುದೇ ಪರಿಹಾರವಾಗುವುದಿಲ್ಲ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>‘ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡುವುದೂ ಈಗ ಕಷ್ಟವಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>‘ಖಾಲಿ ಇರುವ ಸ್ಥಾನಗಳಿಗೆ ನ್ಯಾಯಮೂರ್ತಿಗಳ ಭರ್ತಿಗೆ ಪ್ರಯತ್ನಿಸಿ. ಅದು, ಎಷ್ಟು ಕಷ್ಟದ ಕೆಲಸ ಎಂದು ನಿಮಗೇ ಅರಿವಾಗುತ್ತದೆ. ಅಲಹಾಬಾದ್ ಹೈಕೋರ್ಟ್ನಲ್ಲಿ 160 ಸ್ಥಾನಗಳನ್ನು ಭರ್ತಿ ಮಾಡುವುದೇ ಕಷ್ಟವಾಗಿದೆ. 320 ಮಂದಿ ನೇಮಕ ಮಾಡಬೇಕು ಎಂದು ಅರ್ಜಿದಾರರು ಕೋರುತ್ತಿದ್ದಾರೆ’ ಎಂದು ಪೀಠ ಹೇಳಿತು.</p>.<p>ನ್ಯಾಯಮೂರ್ತಿಗಳ ಸಂಖ್ಯೆ ದ್ವಿಗುಣಗೊಳಿಸಲು ಕೋರಿ ಅರ್ಜಿ ಸಲ್ಲಿಸಿದ್ದ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು, ‘ವಿವಿಧ ಕೋರ್ಟ್ಗಳಲ್ಲಿ 5 ಕೋಟಿ ಪ್ರಕರಣಗಳು ಬಾಕಿ ಇವೆ. ಸುಮಾರು 20 ಕೋಟಿ ಜನರು ಬಾಧಿತರಾಗಿದ್ದಾರೆ. ಇದು, ಅಮೆರಿಕದ ಜನಸಂಖ್ಯೆಗೆ ಸಮಾನವಾದುದು’ ಎಂದು ಪ್ರತಿಪಾದಿಸಿದ್ದರು.</p>.<p>‘ಈಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು, ‘ಆರು ತಿಂಗಳಲ್ಲಿ ಎಲ್ಲ ಪ್ರಕರಣಗಳನ್ನು ವಿಲೇವಾರಿ ಮಾಡಿ ಎಂದು ಸಂಸತ್ತು ಕಾಯ್ದೆಯನ್ನು ರೂಪಿಸಿದಂತಿದೆ’ ಎಂದು ಅಭಿಪ್ರಾಯಪಟ್ಟಿತು.</p>.<p>’ನೀವು ಬಾಂಬೆ ಹೈಕೋರ್ಟ್ ಗಮನಿಸಿದ್ದೀರಾ? ಮೂಲಸೌಲಭ್ಯ ಕೊರತೆಯಿಂದ ಅಲ್ಲಿ ಒಬ್ಬ ನ್ಯಾಯಮೂರ್ತಿ ಹೆಚ್ಚುವರಿ ಸೇರ್ಪಡೆ ಆಗಿಲ್ಲ’. ಎಂದು ಪೀಠ ಅರ್ಜಿದಾರರಿಗೆ ತಿಳಿಸಿತು.</p>.<p>ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನಿರಾಕರಿಸಿದ ಪೀಠವು,ಇಂಥ ಪಿಐಎಲ್ ಸಲ್ಲಿಸಿದ ಸಂದರ್ಭದಲ್ಲಿ ನ್ಯಾಯಾಲಯದ ಸಮಯ ಪೋಲು ಮಾಡಿದ್ದಕ್ಕಾಗಿ ದಂಡ ವಿಧಿಸಬಹುದಾಗಿದೆ ಎಂದು ಹೇಳಿತು. ‘ಪ್ರತಿ ಸಮಸ್ಯೆಗೂ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಬೇಕೆಂದೇನೂ ಇಲ್ಲ’ ಎಂದೂ ಅಭಿಪ್ರಾಯಪಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>