ಬಂಧಿತರಲ್ಲಿ ವೀರೇಂದ್ರ ಸಿನ್ಹಾ ತಾವ್ಡೆ, ಸಚಿನ್ ಅಂಧೂರೆ, ಶರದ್ ಕಲಸ್ಕರ್ ಮತ್ತು ವಿಕ್ರಂ ಭಾವೆ ವಿರುದ್ದ ಐಪಿಸಿ ಅನ್ವಯ ಕೊಲೆ ಮೊಕದ್ದಮೆ, ಕ್ರಿಮಿನಲ್ ಸಂಚು ಹಾಗೂ ಶಸ್ತ್ರಾಸ್ತ್ರ ಕಾಯ್ದೆ, ಕಾನೂನುಬಾಹಿರ ಕೃತ್ಯಗಳ ನಿಯಂತ್ರಣ ಕಾಯ್ದೆಯನ್ವಯ ಆರೋಪಗಳನ್ನು ಅಂತಿಮಗೊಳಿಸಲಾಗುವುದು. ವಕೀಲ ಸಂಜೀವ್ ಪುನಲೇಖರ್ ವಿರುದ್ಧ ಸಾಕ್ಷ್ಯ ನಾಪತ್ತೆಗೆ ಯತ್ನ, ತಪ್ಪು ಮಾಹಿತಿ ನೀಡಿದ ಆರೋಪಗಳನ್ನು ಅಂತಿಮಗೊಳಿಸಲಾಗುವುದ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಆರ್.ನವಂದರ್ ತಿಳಿಸಿದ್ದಾರೆ.