<p><strong>ಹೈದರಾಬಾದ್:‘</strong>ಪರಿಸರದ ಮೇಲಿನ ಪರಿಣಾಮಗಳ ಮೌಲ್ಯಮಾಪನ’ (ಇಐಎ) ಕರಡಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಹಾಗೂ ಜನವಿರೋಧಿ ನೀತಿಯಾಗಿದೆ ಎಂದು ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ.</p>.<p>‘ಇಐಎ ಕರಡು ಅಧಿಸೂಚನೆ 2020’ ಎಂಬ ವಿಷಯ ಕುರಿತು ಡಾ.ಎಂ.ಚನ್ನಾ ರೆಡ್ಡಿ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ ಆನ್ಲೈನ್ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಇಂಥ ನಡೆಯಿಂದ ಪರಿಸರಕ್ಕೆ ಸಂಬಂಧಿಸಿದ ಕಾನೂನುಗಳು ದುರ್ಬಲಗೊಂಡಿವೆ. ಇದು ಒಕ್ಕೂಟ ವ್ಯವಸ್ಥೆಯ ವಿರೋಧಿಯೂ ಆಗಿದೆ ಎಂದು ಟೀಕಿಸಿದರು.</p>.<p>‘ಪರಿಸರ ಸಚಿವ ಜಾವಡೇಕರ್ ಅವರುಪರಿಸರ, ಅರಣ್ಯಗಳನ್ನು ಸಂರಕ್ಷಿಸುವುದನ್ನು ಬಿಟ್ಟು ಪರಿಸರಕ್ಕೆ ಮಾರಕವಾದ ಯೋಜನೆಗಳಿಗೆ ತ್ವರಿತವಾಗಿ ಅನುಮೋದನೆ ನೀಡುವುದೇ ತಮ್ಮ ಕೆಲಸ ಎಂಬುದಾಗಿ ಭಾವಿಸಿದಂತಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಹೊಸ ಉದ್ದಿಮೆಗಳ ಸ್ಥಾಪನೆಗೆ ತ್ವರಿತವಾಗಿ ಅನುಮೋದನೆ ನೀಡುವುದಕ್ಕೆ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ತ್ವರಿತ ಅನುಮೋದನೆ ನೀಡಲು ಪರಿಸರ ಕಾನೂನುಗಳು ವೇಗತಡೆಗಳಂತೆ ಕಂಡವು. ಹೀಗಾಗಿಯೇ ಕಾನೂನುಗಳನ್ನು ದುರ್ಬಲಗೊಳಿಸಲು ಸರ್ಕಾರ ಮುಂದಾಗಿದೆ’ ಎಂದು ವಿಶ್ಲೇಷಿಸಿದರು.</p>.<p>‘ರಾಷ್ಟ್ರೀಯ ಹಸಿರು ನ್ಯಾಯಪೀಠವನ್ನು ಸಹ ದುರ್ಬಲಗೊಳಿಸಲಾಗಿದೆ. ಪರಿಸರ ಸಂರಕ್ಷಣೆ ವಿಚಾರದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನೂ ಇಐಎ ಕಡಿಮೆ ಮಾಡಲಿದೆ. ಎಲ್ಲಿಯಾದರು ಪರಿಸರ ಕಾನೂನುಗಳ ಉಲ್ಲಂಘನೆ ನಡೆಯುತ್ತಿರುವುದು ಕಂಡು ಬಂದರೂ, ಸ್ಥಳೀಯ ಸಮುದಾಯಗಳು, ಎನ್ಜಿಒಗಳು, ಯಾವುದೇ ಸಂಘಟನೆಗಳು ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲು ಇನ್ನು ಮುಂದೆ ಅವಕಾಶ ಇರುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:‘</strong>ಪರಿಸರದ ಮೇಲಿನ ಪರಿಣಾಮಗಳ ಮೌಲ್ಯಮಾಪನ’ (ಇಐಎ) ಕರಡಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಹಾಗೂ ಜನವಿರೋಧಿ ನೀತಿಯಾಗಿದೆ ಎಂದು ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ.</p>.<p>‘ಇಐಎ ಕರಡು ಅಧಿಸೂಚನೆ 2020’ ಎಂಬ ವಿಷಯ ಕುರಿತು ಡಾ.ಎಂ.ಚನ್ನಾ ರೆಡ್ಡಿ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ ಆನ್ಲೈನ್ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಇಂಥ ನಡೆಯಿಂದ ಪರಿಸರಕ್ಕೆ ಸಂಬಂಧಿಸಿದ ಕಾನೂನುಗಳು ದುರ್ಬಲಗೊಂಡಿವೆ. ಇದು ಒಕ್ಕೂಟ ವ್ಯವಸ್ಥೆಯ ವಿರೋಧಿಯೂ ಆಗಿದೆ ಎಂದು ಟೀಕಿಸಿದರು.</p>.<p>‘ಪರಿಸರ ಸಚಿವ ಜಾವಡೇಕರ್ ಅವರುಪರಿಸರ, ಅರಣ್ಯಗಳನ್ನು ಸಂರಕ್ಷಿಸುವುದನ್ನು ಬಿಟ್ಟು ಪರಿಸರಕ್ಕೆ ಮಾರಕವಾದ ಯೋಜನೆಗಳಿಗೆ ತ್ವರಿತವಾಗಿ ಅನುಮೋದನೆ ನೀಡುವುದೇ ತಮ್ಮ ಕೆಲಸ ಎಂಬುದಾಗಿ ಭಾವಿಸಿದಂತಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಹೊಸ ಉದ್ದಿಮೆಗಳ ಸ್ಥಾಪನೆಗೆ ತ್ವರಿತವಾಗಿ ಅನುಮೋದನೆ ನೀಡುವುದಕ್ಕೆ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ತ್ವರಿತ ಅನುಮೋದನೆ ನೀಡಲು ಪರಿಸರ ಕಾನೂನುಗಳು ವೇಗತಡೆಗಳಂತೆ ಕಂಡವು. ಹೀಗಾಗಿಯೇ ಕಾನೂನುಗಳನ್ನು ದುರ್ಬಲಗೊಳಿಸಲು ಸರ್ಕಾರ ಮುಂದಾಗಿದೆ’ ಎಂದು ವಿಶ್ಲೇಷಿಸಿದರು.</p>.<p>‘ರಾಷ್ಟ್ರೀಯ ಹಸಿರು ನ್ಯಾಯಪೀಠವನ್ನು ಸಹ ದುರ್ಬಲಗೊಳಿಸಲಾಗಿದೆ. ಪರಿಸರ ಸಂರಕ್ಷಣೆ ವಿಚಾರದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನೂ ಇಐಎ ಕಡಿಮೆ ಮಾಡಲಿದೆ. ಎಲ್ಲಿಯಾದರು ಪರಿಸರ ಕಾನೂನುಗಳ ಉಲ್ಲಂಘನೆ ನಡೆಯುತ್ತಿರುವುದು ಕಂಡು ಬಂದರೂ, ಸ್ಥಳೀಯ ಸಮುದಾಯಗಳು, ಎನ್ಜಿಒಗಳು, ಯಾವುದೇ ಸಂಘಟನೆಗಳು ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲು ಇನ್ನು ಮುಂದೆ ಅವಕಾಶ ಇರುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>