‘ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿದ ಆಸನವು ಅವರು ಹೊಂದಿರುವ ಸ್ಥಾನಕ್ಕೆ ಅನುಗುಣವಾಗಿರಲಿಲ್ಲ. ಶಿಷ್ಟಾಚಾರವನ್ನು ಪಾಲಿಸದಿರುವುದು ಮತ್ತು ಹಿರಿಯ ನಾಯಕನಿಗೆ ಅಗೌರವ ತೋರಿರುವುದರಿಂದ ಆಘಾತಕ್ಕೊಳಗಾಗಿದ್ದೇವೆ. ಈ ವಿಚಾರವಾಗಿ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸುವುದಕ್ಕಾಗಿ ಈ ಪತ್ರ ಬರೆಯುತ್ತಿದ್ದೇವೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.