ಇದೇ 22ರಂದು ಅರ್ಜಿಯೊಂದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಮತ್ತು ದೀಪಾಂಕರ್ ದತ್ತ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ, ‘ಒಣ ಮಲ ಶೌಚಾಲಯ ನಿರ್ಮೂಲನೆ, ಒಣ ಮಲ ಗುಂಡಿಗಳು ಹಾಗೂ ಕಂಟೋನ್ಮೆಂಟ್ ಬೋರ್ಡ್ ಹಾಗೂ ರೈಲ್ವೆಯಲ್ಲಿ ಕೆಲಸ ಮಾಡುವ ಸಫಾಯಿ ಕರ್ಮಚಾರಿಗಳ ಪುನರ್ವಸತಿಗೆ ಕೈಗೊಂಡಿರುವ ಕ್ರಮಗಳ ಕುರಿತ ರಾಜ್ಯವಾರು ಮಾಹಿತಿ ಒದಗಿಸಿ’ ಎಂದು ತಿಳಿಸಿದೆ.