<p><strong>ನವದೆಹಲಿ: </strong>74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಗುರುವಾರ ಬೆಳಿಗ್ಗೆ 7ರಿಂದ 9 ಗಂಟೆಯವರಿಗೆ ಭಾರತೀಯ ನೌಕಾಪಡೆ, ವಾಯುಪಡೆ ಮತ್ತು ಭೂಸೇನಾ ಪಡೆಗಳು ಗುರುವಾರ ತಾಲೀಮು ನಡೆಸಿದವು.</p>.<p>‘ರಕ್ಷಣಾ ಸಿಬ್ಬಂದಿ ಮುಂಜಾನೆ 3ಗಂಟೆಗೆ ಸ್ಥಳದಲ್ಲಿ ಹಾಜರಿದ್ದರು. ಬೆಳಿಗ್ಗೆ 7.18ಕ್ಕೆ ಪ್ರಧಾನ ಮಂತ್ರಿ ಅವರ ಬೆಂಗಾವಲು ಪಡೆಯು ಕೆಂಪುಕೋಟೆ ತಲುಪಿತು. ಬೆಳಿಗ್ಗೆ 9ಗಂಟೆಯ ಸುಮಾರಿಗೆ ತಾಲೀಮು ಯಶಸ್ವಿಯಾಗಿ ಮುಕ್ತಾಯಗೊಂಡಿತು’ ಎಂದು ದೆಹಲಿಯ ಡೆಪ್ಯುಟಿ ಪೊಲೀಸ್ ಕಮಿಷನರ್ (ಉತ್ತರ) ಮೋನಿಕಾ ಭಾರದ್ವಾಜ್ ತಿಳಿಸಿದ್ದಾರೆ.</p>.<p>ಸ್ಥಳದಲ್ಲಿ ಕಠಿಣ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. ತಾಲೀಮಿನ ಸಂದರ್ಭದಲ್ಲಿ ಕೆಂಪುಕೋಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಆಗಸ್ಟ್ 15 ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕಾಗಿ ಈಗಾಗಲೇ ಕೆಂಪು ಕೋಟೆಯನ್ನು ಸಾರ್ವಜನಿಕ ವೀಕ್ಷಣೆಗೆ ಬಂದ್ ಮಾಡಲಾಗಿದೆ.</p>.<p>‘ಕೆಂಪು ಕೋಟೆಯಲ್ಲಿ ಸುಮಾರು 4 ಸಾವಿರ ಭದ್ರತಾ ಸಿಬ್ಬಂದಿಯನ್ನು ರಕ್ಷಣೆಗಾಗಿ ನಿಯೋಜಿಸಲಾಗುವುದು. ಸಿಬ್ಬಂದಿ ಅಂತರ ಕಾಯ್ದುಕೊಳ್ಳಲಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಆಹ್ವಾನಿತರಲ್ಲಿ, ಕಳೆದ ಎರಡು ವಾರಗಳಲ್ಲಿ ಕೋವಿಡ್–19 ಲಕ್ಷಣಗಳು ಕಾಣಿಸಿಕೊಂಡಿರುವವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು. ಆಹ್ವಾನಿತರು ಗೃಹ ಮತ್ತು ಆರೋಗ್ಯ ಸಚಿವಾಲಯವು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು’ ಎಂದು ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಗುರುವಾರ ಬೆಳಿಗ್ಗೆ 7ರಿಂದ 9 ಗಂಟೆಯವರಿಗೆ ಭಾರತೀಯ ನೌಕಾಪಡೆ, ವಾಯುಪಡೆ ಮತ್ತು ಭೂಸೇನಾ ಪಡೆಗಳು ಗುರುವಾರ ತಾಲೀಮು ನಡೆಸಿದವು.</p>.<p>‘ರಕ್ಷಣಾ ಸಿಬ್ಬಂದಿ ಮುಂಜಾನೆ 3ಗಂಟೆಗೆ ಸ್ಥಳದಲ್ಲಿ ಹಾಜರಿದ್ದರು. ಬೆಳಿಗ್ಗೆ 7.18ಕ್ಕೆ ಪ್ರಧಾನ ಮಂತ್ರಿ ಅವರ ಬೆಂಗಾವಲು ಪಡೆಯು ಕೆಂಪುಕೋಟೆ ತಲುಪಿತು. ಬೆಳಿಗ್ಗೆ 9ಗಂಟೆಯ ಸುಮಾರಿಗೆ ತಾಲೀಮು ಯಶಸ್ವಿಯಾಗಿ ಮುಕ್ತಾಯಗೊಂಡಿತು’ ಎಂದು ದೆಹಲಿಯ ಡೆಪ್ಯುಟಿ ಪೊಲೀಸ್ ಕಮಿಷನರ್ (ಉತ್ತರ) ಮೋನಿಕಾ ಭಾರದ್ವಾಜ್ ತಿಳಿಸಿದ್ದಾರೆ.</p>.<p>ಸ್ಥಳದಲ್ಲಿ ಕಠಿಣ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. ತಾಲೀಮಿನ ಸಂದರ್ಭದಲ್ಲಿ ಕೆಂಪುಕೋಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಆಗಸ್ಟ್ 15 ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕಾಗಿ ಈಗಾಗಲೇ ಕೆಂಪು ಕೋಟೆಯನ್ನು ಸಾರ್ವಜನಿಕ ವೀಕ್ಷಣೆಗೆ ಬಂದ್ ಮಾಡಲಾಗಿದೆ.</p>.<p>‘ಕೆಂಪು ಕೋಟೆಯಲ್ಲಿ ಸುಮಾರು 4 ಸಾವಿರ ಭದ್ರತಾ ಸಿಬ್ಬಂದಿಯನ್ನು ರಕ್ಷಣೆಗಾಗಿ ನಿಯೋಜಿಸಲಾಗುವುದು. ಸಿಬ್ಬಂದಿ ಅಂತರ ಕಾಯ್ದುಕೊಳ್ಳಲಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಆಹ್ವಾನಿತರಲ್ಲಿ, ಕಳೆದ ಎರಡು ವಾರಗಳಲ್ಲಿ ಕೋವಿಡ್–19 ಲಕ್ಷಣಗಳು ಕಾಣಿಸಿಕೊಂಡಿರುವವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು. ಆಹ್ವಾನಿತರು ಗೃಹ ಮತ್ತು ಆರೋಗ್ಯ ಸಚಿವಾಲಯವು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು’ ಎಂದು ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>