<p><strong>ಕೇದಾರನಾಥ (ಉತ್ತರಾಖಂಡ):</strong> ಕೇದಾರನಾಥ ದೇವಾಲಯದಿಂದ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನವಾಗಿ ಪೈಲೆಟ್ ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಮಂಗಳವಾರ ಸಂಭವಿಸಿದೆ.</p>.<p>ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.</p>.<p>ಕೇದಾರನಾಥ ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ಸೇರಿದಂತೆ ಯಾತ್ರಾರ್ಥಿಗಳು ಮೃತಪಟ್ಟಿರುವ ಸಂಗತಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ’ ಎಂದು ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.</p>.<p>ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತ ಅತೀವ ದುಃಖಕರವಾಗಿದೆ. ಕುಟುಂಬದವರ ದುಃಖದಲ್ಲಿನಾನು ಭಾಗಿಯಾಗುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿಕೆಯನ್ನು ಟ್ವೀಟ್ ಮಾಡಿದೆ.</p>.<p>ದುರಂತ ಕುರಿತು ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದ್ದು, ಆರು ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ಇನ್ನೊಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ. ಹೆಲಿಕಾಪ್ಟರ್ನಲ್ಲಿ ಒಟ್ಟು 7 ಜನ ಇದ್ದರು.</p>.<p>ಈ ದುರ್ಘಟನೆ ಕೇದಾರನಾಥದಿಂದ ಅಣತಿ ದೂರದಲ್ಲಿರುವ ಫಾಟಾದಲ್ಲಿ ನಡೆದಿದೆ. ಮೃತರ ಗುರುತು ಪತ್ತೆಗೆ ಶ್ರಮಿಸಲಾಗುತ್ತಿದ್ದು, ಪರಿಹಾರ ಕಾರ್ಯಾಚರಣೆ ತಂಡ ಸ್ಥಳಕ್ಕೆ ತೆರಳಿದೆ ಎಂದು ಉತ್ತರಾಖಂಡ ಸಿಎಂ ಅವರ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ತಿಳಿಸಿದ್ದಾರೆ.</p>.<p>ಹೆಲಿಕಾಪ್ಟರ್ ಕೇದಾರನಾಥದಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಹವಾಮಾನ ವೈಪರಿತ್ಯದಿಂದ ಅಪಘಾತಕ್ಕೆ ಈಡಾಗಿದೆ ಎಂದು ವರದಿ ತಿಳಿಸಿದೆ. ಹೆಲಿಕಾಪ್ಟರ್ ಡೆಹರಾಡೂನ್ಗೆ ತೆರಳುತ್ತಿತ್ತು ಎನ್ನಲಾಗಿದೆ.</p>.<p>ಘಟನೆ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತನಿಖೆಗೆ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೇದಾರನಾಥ (ಉತ್ತರಾಖಂಡ):</strong> ಕೇದಾರನಾಥ ದೇವಾಲಯದಿಂದ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನವಾಗಿ ಪೈಲೆಟ್ ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಮಂಗಳವಾರ ಸಂಭವಿಸಿದೆ.</p>.<p>ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.</p>.<p>ಕೇದಾರನಾಥ ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ಸೇರಿದಂತೆ ಯಾತ್ರಾರ್ಥಿಗಳು ಮೃತಪಟ್ಟಿರುವ ಸಂಗತಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ’ ಎಂದು ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.</p>.<p>ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತ ಅತೀವ ದುಃಖಕರವಾಗಿದೆ. ಕುಟುಂಬದವರ ದುಃಖದಲ್ಲಿನಾನು ಭಾಗಿಯಾಗುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿಕೆಯನ್ನು ಟ್ವೀಟ್ ಮಾಡಿದೆ.</p>.<p>ದುರಂತ ಕುರಿತು ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದ್ದು, ಆರು ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ಇನ್ನೊಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ. ಹೆಲಿಕಾಪ್ಟರ್ನಲ್ಲಿ ಒಟ್ಟು 7 ಜನ ಇದ್ದರು.</p>.<p>ಈ ದುರ್ಘಟನೆ ಕೇದಾರನಾಥದಿಂದ ಅಣತಿ ದೂರದಲ್ಲಿರುವ ಫಾಟಾದಲ್ಲಿ ನಡೆದಿದೆ. ಮೃತರ ಗುರುತು ಪತ್ತೆಗೆ ಶ್ರಮಿಸಲಾಗುತ್ತಿದ್ದು, ಪರಿಹಾರ ಕಾರ್ಯಾಚರಣೆ ತಂಡ ಸ್ಥಳಕ್ಕೆ ತೆರಳಿದೆ ಎಂದು ಉತ್ತರಾಖಂಡ ಸಿಎಂ ಅವರ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ತಿಳಿಸಿದ್ದಾರೆ.</p>.<p>ಹೆಲಿಕಾಪ್ಟರ್ ಕೇದಾರನಾಥದಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಹವಾಮಾನ ವೈಪರಿತ್ಯದಿಂದ ಅಪಘಾತಕ್ಕೆ ಈಡಾಗಿದೆ ಎಂದು ವರದಿ ತಿಳಿಸಿದೆ. ಹೆಲಿಕಾಪ್ಟರ್ ಡೆಹರಾಡೂನ್ಗೆ ತೆರಳುತ್ತಿತ್ತು ಎನ್ನಲಾಗಿದೆ.</p>.<p>ಘಟನೆ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತನಿಖೆಗೆ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>