<p class="title"><strong>ತಿರುವನಂತಪುರ: </strong>ಕೇರಳದ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಅವರ ತಿರುವನಂತಪುರ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರವೂ ಶೋಧ ಮುಂದುವರೆಸಿದ್ದಾರೆ.</p>.<p class="title">ಇದನ್ನು ವಿರೋಧಿಸಿ, ಬಿನೀಶ್ ಕೊಡಿಯೇರಿ ಮನೆ ಮುಂದೆ ಅವರ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಬಿನೀಶ್ ಅವರ ಪತ್ನಿ ಹಾಗೂ ಮಕ್ಕಳನ್ನು ಗೃಹಬಂಧನದಲ್ಲಿಡಲಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.</p>.<p class="title">ಈ ಕುರಿತು ಸಂಬಂಧಿಕರು ಕೇರಳ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೂ ದೂರು ನೀಡಿದ್ದು, ಆಯೋಗದ ಸದಸ್ಯರು ಬಿನೀಶ್ ಮನೆ ತಲುಪಿದ್ದಾರೆ.</p>.<p class="title">ಈ ಕುರಿತ ದೂರಿನನ್ವಯ ಪೊಲೀಸ್ ಅಧಿಕಾರಿಗಳು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದು, ಶೋಧ ಅಂತಿಮ ಹಂತದಲ್ಲಿದೆ ಎಂದು ಪ್ರತಿಭಟನನಿರತ ಸಂಬಂಧಿಕರಿಗೆ ಸಮಾಧಾನಪಡಿಸಿದ್ದಾರೆ.</p>.<p class="title">ಬೆಂಗಳೂರು ಡ್ರಗ್ಸ್ ಜಾಲ, ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿನೀಶ್ ಮನೆಗೆ ಮಂಗಳವಾರ ದಾಳಿ ನಡೆಸಿದ್ದರು. ಮನೆಯಲ್ಲಿ ರೆನಿಟಾ, ಇಬ್ಬರು ಮಕ್ಕಳು ಹಾಗೂ ತಾಯಿ ಇದ್ದಾರೆ. ಬಿನೀಶ್ ಅವರನ್ನು ಈಗಾಗಲೇ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p class="title"><strong>ಇದನ್ನೂ ಓದಿ:</strong><a href="https://www.prajavani.net/karnataka-news/bineesh-kodiyeri-withdrawn-application-for-request-lawyers-meet-776552.html" target="_blank">ವಕೀಲರ ಭೇಟಿ ಅವಕಾಶ ಕೋರಿದ್ದ ಅರ್ಜಿ ಹಿಂಪಡೆದ ಬಿನೀಶ್ ಕೊಡಿಯೇರಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ತಿರುವನಂತಪುರ: </strong>ಕೇರಳದ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಅವರ ತಿರುವನಂತಪುರ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರವೂ ಶೋಧ ಮುಂದುವರೆಸಿದ್ದಾರೆ.</p>.<p class="title">ಇದನ್ನು ವಿರೋಧಿಸಿ, ಬಿನೀಶ್ ಕೊಡಿಯೇರಿ ಮನೆ ಮುಂದೆ ಅವರ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಬಿನೀಶ್ ಅವರ ಪತ್ನಿ ಹಾಗೂ ಮಕ್ಕಳನ್ನು ಗೃಹಬಂಧನದಲ್ಲಿಡಲಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.</p>.<p class="title">ಈ ಕುರಿತು ಸಂಬಂಧಿಕರು ಕೇರಳ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೂ ದೂರು ನೀಡಿದ್ದು, ಆಯೋಗದ ಸದಸ್ಯರು ಬಿನೀಶ್ ಮನೆ ತಲುಪಿದ್ದಾರೆ.</p>.<p class="title">ಈ ಕುರಿತ ದೂರಿನನ್ವಯ ಪೊಲೀಸ್ ಅಧಿಕಾರಿಗಳು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದು, ಶೋಧ ಅಂತಿಮ ಹಂತದಲ್ಲಿದೆ ಎಂದು ಪ್ರತಿಭಟನನಿರತ ಸಂಬಂಧಿಕರಿಗೆ ಸಮಾಧಾನಪಡಿಸಿದ್ದಾರೆ.</p>.<p class="title">ಬೆಂಗಳೂರು ಡ್ರಗ್ಸ್ ಜಾಲ, ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿನೀಶ್ ಮನೆಗೆ ಮಂಗಳವಾರ ದಾಳಿ ನಡೆಸಿದ್ದರು. ಮನೆಯಲ್ಲಿ ರೆನಿಟಾ, ಇಬ್ಬರು ಮಕ್ಕಳು ಹಾಗೂ ತಾಯಿ ಇದ್ದಾರೆ. ಬಿನೀಶ್ ಅವರನ್ನು ಈಗಾಗಲೇ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p class="title"><strong>ಇದನ್ನೂ ಓದಿ:</strong><a href="https://www.prajavani.net/karnataka-news/bineesh-kodiyeri-withdrawn-application-for-request-lawyers-meet-776552.html" target="_blank">ವಕೀಲರ ಭೇಟಿ ಅವಕಾಶ ಕೋರಿದ್ದ ಅರ್ಜಿ ಹಿಂಪಡೆದ ಬಿನೀಶ್ ಕೊಡಿಯೇರಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>