<p><strong>ಮುಂಬೈ:</strong> ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ,ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರ್ಯನ್ ಖಾನ್ ಮತ್ತು ಇತರ 7 ಮಂದಿಗೆ ಮುಂಬೈ ನ್ಯಾಯಾಲಯವು ಗುರುವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.</p>.<p>ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆ ಶುಕ್ರವಾರ ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ. ಮಾದಕ ದ್ರವ್ಯ ನಿಯಂತ್ರಣಾ ವಿಭಾಗವು (ಎನ್ಸಿಬಿ) ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿತ್ತು. ಆದರೆ ಎನ್ಸಿಬಿಯ ವಿನಂತಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.</p>.<p>ಅಕ್ಟೋಬರ್ 3 ರಂದು ಮುಂಬೈ ಕಡಲ ತೀರದಲ್ಲಿ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ತಂಡ, ಶಾರುಖ್ ಮಗ ಆರ್ಯನ್ ಖಾನ್, ಮುನ್ಮುನ್ ಧಮೆಚಾ ಮತ್ತು ಅರ್ಬಾಜ್ ಎಂಬುವವರನ್ನು ಬಂಧಿಸಿತ್ತು. ನಂತರ ಇತರ 5 ಮಂದಿಯನ್ನು ಸೆರೆ ಹಿಡಿದಿತ್ತು.</p>.<p>ಈ ಹಿಂದೆ ನ್ಯಾಯಾಲಯವು ಆರೋಪಿಗಳನ್ನು ಅ. 7ರ ವರೆಗೆ ಎನ್ಸಿಬಿ ವಶಕ್ಕೆ ನೀಡಿತ್ತು. ಈ ಅವಧಿಯನ್ನು ವಿಸ್ತರಿಸುಂತೆ ಎನ್ಸಿಬಿ ಅಧಿಕಾರಿಗಳು ಕೋರಿದ್ದರು. ಆದರೆ, ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ,ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರ್ಯನ್ ಖಾನ್ ಮತ್ತು ಇತರ 7 ಮಂದಿಗೆ ಮುಂಬೈ ನ್ಯಾಯಾಲಯವು ಗುರುವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.</p>.<p>ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆ ಶುಕ್ರವಾರ ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ. ಮಾದಕ ದ್ರವ್ಯ ನಿಯಂತ್ರಣಾ ವಿಭಾಗವು (ಎನ್ಸಿಬಿ) ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿತ್ತು. ಆದರೆ ಎನ್ಸಿಬಿಯ ವಿನಂತಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.</p>.<p>ಅಕ್ಟೋಬರ್ 3 ರಂದು ಮುಂಬೈ ಕಡಲ ತೀರದಲ್ಲಿ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ತಂಡ, ಶಾರುಖ್ ಮಗ ಆರ್ಯನ್ ಖಾನ್, ಮುನ್ಮುನ್ ಧಮೆಚಾ ಮತ್ತು ಅರ್ಬಾಜ್ ಎಂಬುವವರನ್ನು ಬಂಧಿಸಿತ್ತು. ನಂತರ ಇತರ 5 ಮಂದಿಯನ್ನು ಸೆರೆ ಹಿಡಿದಿತ್ತು.</p>.<p>ಈ ಹಿಂದೆ ನ್ಯಾಯಾಲಯವು ಆರೋಪಿಗಳನ್ನು ಅ. 7ರ ವರೆಗೆ ಎನ್ಸಿಬಿ ವಶಕ್ಕೆ ನೀಡಿತ್ತು. ಈ ಅವಧಿಯನ್ನು ವಿಸ್ತರಿಸುಂತೆ ಎನ್ಸಿಬಿ ಅಧಿಕಾರಿಗಳು ಕೋರಿದ್ದರು. ಆದರೆ, ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>