<p><strong>ಮುಂಬೈ: </strong>ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಪಠಾಣ್ ಎಂಬಾತನನ್ನು ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.</p>.<p>ಕಳೆದ ತಿಂಗಳು ಇದೇ ಪ್ರಕರಣ ಸಂಬಂಧ ಪಠಾಣ್ ಸಂಬಂಧಿಕ ಡಾನ್ ಕರೀಂ ಲಾಲಾ ಎಂಬಾತನನ್ನು ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆಯ (ಎನ್ಸಿಬಿ) ಅಧಿಕಾರಿಗಳು ನವಿ ಮುಂಬೈನಲ್ಲಿ ಬಂಧಿಸಿದ್ದರು.</p>.<p>ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಡ್ರಗ್ಸ್ ಪ್ರಕರಣದಡಿ ಸೋಹಿಲ್ ಸಯ್ಯದ್ ಮತ್ತು ಝಿಶಾನ್ ಎಂಬವರನ್ನು ಬಂಧಿಸಲಾಗಿತ್ತು. ಈ ವೇಳೆ ಚಿಂಕು ಪಠಾಣ್ ಕೂಡ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ವಿಷಯ ತಿಳಿದುಬಂದಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದರು.</p>.<p>ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಸಿಬಿ ಬಂಧನದಲ್ಲಿದ್ದ ಪಠಾಣ್ನನ್ನು ಶನಿವಾರ ಎಟಿಎಸ್ ವಶಕ್ಕೆ ಪಡೆದುಕೊಂಡಿದೆ. ಅದೇ ದಿನ ಎಟಿಸಿ ಆತನನ್ನು ಮುಂಬೈ ನ್ಯಾಯಾಲಕ್ಕೆ ಹಾಜರುಪಡಿಸಿತ್ತು.ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು ಫೆಬ್ರುವರಿ 10 ತನಕ, ಪಠಾಣ್ನನ್ನು ಎಟಿಎಸ್ ಕಸ್ಟಡಿಗೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಪಠಾಣ್ ಎಂಬಾತನನ್ನು ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.</p>.<p>ಕಳೆದ ತಿಂಗಳು ಇದೇ ಪ್ರಕರಣ ಸಂಬಂಧ ಪಠಾಣ್ ಸಂಬಂಧಿಕ ಡಾನ್ ಕರೀಂ ಲಾಲಾ ಎಂಬಾತನನ್ನು ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆಯ (ಎನ್ಸಿಬಿ) ಅಧಿಕಾರಿಗಳು ನವಿ ಮುಂಬೈನಲ್ಲಿ ಬಂಧಿಸಿದ್ದರು.</p>.<p>ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಡ್ರಗ್ಸ್ ಪ್ರಕರಣದಡಿ ಸೋಹಿಲ್ ಸಯ್ಯದ್ ಮತ್ತು ಝಿಶಾನ್ ಎಂಬವರನ್ನು ಬಂಧಿಸಲಾಗಿತ್ತು. ಈ ವೇಳೆ ಚಿಂಕು ಪಠಾಣ್ ಕೂಡ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ವಿಷಯ ತಿಳಿದುಬಂದಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದರು.</p>.<p>ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಸಿಬಿ ಬಂಧನದಲ್ಲಿದ್ದ ಪಠಾಣ್ನನ್ನು ಶನಿವಾರ ಎಟಿಎಸ್ ವಶಕ್ಕೆ ಪಡೆದುಕೊಂಡಿದೆ. ಅದೇ ದಿನ ಎಟಿಸಿ ಆತನನ್ನು ಮುಂಬೈ ನ್ಯಾಯಾಲಕ್ಕೆ ಹಾಜರುಪಡಿಸಿತ್ತು.ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು ಫೆಬ್ರುವರಿ 10 ತನಕ, ಪಠಾಣ್ನನ್ನು ಎಟಿಎಸ್ ಕಸ್ಟಡಿಗೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>