ಕಾರು ಅತಿವೇಗವಾಗಿ ಹೋಗುತ್ತಿತ್ತು. ಅಪಘಾತ ನಡೆದ ಸ್ಥಳದಲ್ಲಿ ಕಾರು ನಿಲ್ಲಿಸಿರಲಿಲ್ಲ. ಸುಮಾರು ಒಂದು ಕಿಲೋಮೀಟರ್ಗೂ ಹೆಚ್ಚು ದೂರು ಚಲಿಸಿದ ಬಳಿಕ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ನಿಂತಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದರು.
ಪ್ರಶಾಂತ್, ಮಲಪ್ಪುರಂನ ಪೊಲೀಸ್ ಕ್ಯಾಂಪ್ನಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಘಟನೆ ಬಳಿಕ ಪ್ರಶಾಂತ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.