ಚೆನ್ನೈ: ಇಲ್ಲಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ತಾಂತ್ರಿಕ ಕಾರಣಗಳಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 172 ಪ್ರಯಾಣಿಕರು ಮತ್ತು ಏಳು ಮಂದಿ ಸಿಬ್ಬಂದಿ ಇದ್ದ ವಿಮಾನವು ಗುರುವಾರ ಸಂಜೆ ಇಲ್ಲಿಂದ ಹೊರಟ ಸ್ವಲ್ಪ ಸಮಯದ ಬಳಿಕ ವಾಪಸ್ ಬಂತು.