ಭೋಪಾಲ್: ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಮಧ್ಯಪ್ರದೇಶದ ನರಸಿಂಗಪುರ ಜಿಲ್ಲೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ 99 ವರ್ಷ ವಯಸ್ಸಾಗಿತ್ತು.
ಸ್ವಾಮಿ ಸರಸ್ವತಿ ಅವರು ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನರಸಿಂಗಪುರ ಜಿಲ್ಲೆಯಲ್ಲಿರುವ ಆಶ್ರಮದಲ್ಲಿ ಮಧ್ಯಾಹ್ನ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಪೀಠದ ಸ್ವಾಮಿ ಸದಾನಂದ ಮಹಾರಾಜ್ ತಿಳಿಸಿದ್ದಾರೆ.
ಸಿಯೋನಿ ಜಿಲ್ಲೆಯ ದಿಘೋರಿ ಎಂಬ ಹಳ್ಳಿಯಲ್ಲಿ 1924ರಲ್ಲಿ ಜನಿಸಿದ ಸ್ವರೂಪಾನಂದ ಸರಸ್ವತಿ ಅವರ ಬಾಲ್ಯದ ಹೆಸರು ಪಥಿರಾಮ್ ಉಪಾದ್ಯಾಯ. ದೇವರ ಹುಡುಕಾಟದಲ್ಲಿ ತೊಡಗಿದ ಅವರು ತಮ್ಮ 9ನೇ ವಯಸ್ಸಿನಲ್ಲಿ ಮನೆಯಿಂದ ಹೊರ ನಡೆದಿದ್ದರು.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸೆರೆವಾಸವನ್ನೂ ಅನುಭವಿಸಿದ್ದರು. 1981ರಲ್ಲಿ ಶಂಕರಾಚಾರ್ಯರಾಗಿ ಬದಲಾದ ಅವರ 99ನೇ ವರ್ಷದ ಜನ್ಮದಿನವನ್ನು ಇತ್ತೀಚೆಗೆ ಆಚರಿಸಲಾಗಿತ್ತು ಎಂದು ಸ್ವಾಮೀಜಿಯ ಅನುಯಾಯಿಗಳು ತಿಳಿಸಿದ್ದಾರೆ.
पूज्यपाद ज्योतिष्पीठाधीश्वर एवं द्वारका शारदापीठाधीश्वर, जगद्गुरु शंकराचार्य स्वामी श्री स्वरूपानंद सरस्वती जी के ब्रह्मलीन होने का समाचार दुःखद है।
उन्होंने हमेशा धर्म और सत्य के मार्ग पर चलने का रास्ता दिखाया। ईश्वर दिवंगत आत्मा को शांति प्रदान करे।