ಇದೇ ವೇಳೆಗೆ ರಕ್ಷಣೆ, ವಾಣಿಜ್ಯ, ಹೂಡಿಕೆ ಹಾಗೂ ಇಂಧನ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರವನ್ನು ವಿಸ್ತರಿಸುವ ಬಗ್ಗೆಯೂ ಚರ್ಚಿಸಲಾಯಿತು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆಯ ಪ್ರಕಟಣೆ ತಿಳಿಸಿದೆ. ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಭಾರತೀಯರಿಗೆ ಸೌದಿ ಅರೇಬಿಯಾ ನೆರವಾಗಿದ್ದನ್ನು ಶ್ಲಾಘಿಸಿದ ಜೈಶಂಕರ್, ಭಾರತದಿಂದ ಗಲ್ಫ್ ದೇಶಗಳಿಗೆ ಪ್ರಯಾಣಿಸುವವರ ಮೇಲಿನ ನಿರ್ಬಂಧಗಳಲ್ಲಿ ಇನ್ನಷ್ಟು ಸಡಿಲಿಕೆ ಮಾಡುವಂತೆ ಗ್ರಹಿಸಿದರು.