<p class="title"><strong>ಪನೋಮ್ ಪೆನ್ (ಕಾಂಬೋಡಿಯಾ) (ಪಿಟಿಐ):</strong> ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಉಕ್ರೇನ್ ವಿದೇಶಾಂಗ ಸಚಿವ ಡಿಮೆಟ್ರೊ ಕುಲೆಬಾ ಅವರೊಂದಿಗೆ ಶನಿವಾರ ಮಾತುಕತೆ ನಡೆಸಿದರು.</p>.<p class="title">ರಷ್ಯಾ– ಉಕ್ರೇನ್ ನಡುವಿನ ಯುದ್ಧ ನಿಲ್ಲಿಸುವ ಹಾದಿಗಳು, ಉಕ್ರೇನ್ನ ಇತ್ತೀಚಿನ ಬೆಳವಣಿಗೆ ಹಾಗೂ ಪರಮಾಣು ಬಗೆಗಿನ ಕಳವಳದ ಬಗ್ಗೆ ಚರ್ಚಿಸಿದರು.</p>.<p>ಕಾಂಬೋಡಿಯಾ ರಾಜಧಾನಿಯಲ್ಲಿ ನಡೆಯುತ್ತಿರುವ ಭಾರತ– ಆಸಿಯಾನ್ ರಾಷ್ಟ್ರಗಳ (ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ಶೃಂಗದಲ್ಲಿ ಭಾಗಿಯಾಗಿರುವ ಅವರು ಕುಲೆಬಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.</p>.<p>‘ಉಕ್ರೇನ್ ವಿದೇಶಾಂಗ ಸಚಿವ ಡಿಮೆಟ್ರೊ ಕುಲೆಬಾ ಅವರನ್ನು ಭೇಟಿಯಾಗಿ ಸಂತೋಷವಾಯಿತು. ಉಕ್ರೇನ್ನಲ್ಲಿನ ಇತ್ತೀಚಿನ ಬೆಳವಣಿಗೆ, ಪರಮಾಣು ಬಳಕೆ ಬಗೆಗಿನ ಕಳವಳದ ಬಗ್ಗೆ ಚರ್ಚೆ ನಡೆಸಲಾಯಿತು’ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.</p>.<p class="bodytext">‘ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ದ್ವಿಪಕ್ಷೀಯ ಸಹಕಾರ, ಜಾಗತಿಕ ಆಹಾರ ಭದ್ರತೆ ಮತ್ತು ಉಕ್ರೇನ್– ರಷ್ಯಾ ಯುದ್ಧ ನಿಲ್ಲಿಸುವ ಕುರಿತು ಚರ್ಚೆ ನಡೆಸಲಾಯಿತು’ ಎಂದು ಕುಲೇಬಾ ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪನೋಮ್ ಪೆನ್ (ಕಾಂಬೋಡಿಯಾ) (ಪಿಟಿಐ):</strong> ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಉಕ್ರೇನ್ ವಿದೇಶಾಂಗ ಸಚಿವ ಡಿಮೆಟ್ರೊ ಕುಲೆಬಾ ಅವರೊಂದಿಗೆ ಶನಿವಾರ ಮಾತುಕತೆ ನಡೆಸಿದರು.</p>.<p class="title">ರಷ್ಯಾ– ಉಕ್ರೇನ್ ನಡುವಿನ ಯುದ್ಧ ನಿಲ್ಲಿಸುವ ಹಾದಿಗಳು, ಉಕ್ರೇನ್ನ ಇತ್ತೀಚಿನ ಬೆಳವಣಿಗೆ ಹಾಗೂ ಪರಮಾಣು ಬಗೆಗಿನ ಕಳವಳದ ಬಗ್ಗೆ ಚರ್ಚಿಸಿದರು.</p>.<p>ಕಾಂಬೋಡಿಯಾ ರಾಜಧಾನಿಯಲ್ಲಿ ನಡೆಯುತ್ತಿರುವ ಭಾರತ– ಆಸಿಯಾನ್ ರಾಷ್ಟ್ರಗಳ (ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ಶೃಂಗದಲ್ಲಿ ಭಾಗಿಯಾಗಿರುವ ಅವರು ಕುಲೆಬಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.</p>.<p>‘ಉಕ್ರೇನ್ ವಿದೇಶಾಂಗ ಸಚಿವ ಡಿಮೆಟ್ರೊ ಕುಲೆಬಾ ಅವರನ್ನು ಭೇಟಿಯಾಗಿ ಸಂತೋಷವಾಯಿತು. ಉಕ್ರೇನ್ನಲ್ಲಿನ ಇತ್ತೀಚಿನ ಬೆಳವಣಿಗೆ, ಪರಮಾಣು ಬಳಕೆ ಬಗೆಗಿನ ಕಳವಳದ ಬಗ್ಗೆ ಚರ್ಚೆ ನಡೆಸಲಾಯಿತು’ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.</p>.<p class="bodytext">‘ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ದ್ವಿಪಕ್ಷೀಯ ಸಹಕಾರ, ಜಾಗತಿಕ ಆಹಾರ ಭದ್ರತೆ ಮತ್ತು ಉಕ್ರೇನ್– ರಷ್ಯಾ ಯುದ್ಧ ನಿಲ್ಲಿಸುವ ಕುರಿತು ಚರ್ಚೆ ನಡೆಸಲಾಯಿತು’ ಎಂದು ಕುಲೇಬಾ ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>