<p><strong>ಅಯೋಧ್ಯೆ (ಉತ್ತರ ಪ್ರದೇಶ): </strong>ಹಿಂದೆ ಉತ್ತರ ಪ್ರದೇಶದಲ್ಲಿದ್ದ ಸರ್ಕಾರ ಸಾರ್ವಜನಿಕರ ಹಣವನ್ನು ‘ಖಬರಸ್ತಾನ‘ಕ್ಕೆ ವಿನಿಯೋಗಿಸುತ್ತಿತ್ತು, ಆದರೆ ಬಿಜೆಪಿ ಆಡಳಿತದಲ್ಲಿ ಆ ಹಣವನ್ನು ದೇವಸ್ಥಾನಗಳ ಪುನರ್ ಅಭಿವೃದ್ಧಿಗೆ ಬಳಸುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.</p>.<p>ದೀಪೋತ್ಸವ ಆಚರಣೆ ಅಂಗವಾಗಿ ಇಲ್ಲಿನ ರಾಮ ಕಥಾ ಪಾರ್ಕ್ನಲ್ಲಿ ಬುಧವಾರಉತ್ತರ ಪ್ರದೇಶ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,</p>.<p>‘ಖಬರಸ್ತಾನದ ಬಗ್ಗೆ ಪ್ರೀತಿ ಇರುವವರು ಜನರ ಹಣವನ್ನು ಅದರ ಅಭಿವೃದ್ಧಿಗೆ ವೆಚ್ಚ ಮಾಡುತ್ತಾರೆ. ಧರ್ಮ ಮತ್ತು ಸಂಸ್ಕೃತಿ ಬಗ್ಗೆ ಪ್ರೀತಿ ಇರುವವರು ಆ ಹಣವನ್ನು ದೇವಸ್ಥಾನದ ಅಭಿವೃದ್ಧಿಗೆ ಖರ್ಚು ಮಾಡುತ್ತಿದ್ದಾರೆ. ಇದೇ ಇಬ್ಬರ ನಡುವಿರುವ ವ್ಯತ್ಯಾಸʼಎಂದು ಹೇಳಿದರು.</p>.<p>ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಉತ್ತರ ಪ್ರದೇಶದ 500 ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ನವೀಕರಣಕ್ಕಾಗಿ ಕೇಂದ್ರ ಸರ್ಕಾರವು ವಿವಿಧ ಯೋಜನೆ ಗಳನ್ನು ಜಾರಿಗೊಳಿಸುತ್ತಿದೆ ಎಂದು ಅವರು ಹೇಳಿದರು.</p>.<p>‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳಿಗೆ ಮುಂದಿನ ವರ್ಷದ ಹೋಳಿ ಹಬ್ಬದವರೆಗೆ ಉಚಿತ ಪಡಿತರ ವಿತರಣೆಯನ್ನು ಮುಂದುವರಿಸಲಾಗುವುದು‘ ಎಂದು ಇದೇ ವೇಳೆ ಪ್ರಕಟಿಸಿದರು.</p>.<p>‘ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಬಡವರಿಗೆ ಉಚಿತವಾಗಿ ಪಡಿತರ ನೀಡುವುದಕ್ಕಾಗಿ ಈ ಯೋಜನೆಯನ್ನು ಆರಂಭಿಸಲಾಗಿತ್ತು. ಅದು ಇದೇ ನವೆಂಬರ್ಗೆ ಮುಕ್ತಾಯಗೊಳ್ಳಲಿದೆ. ಆದರೆ, ಸಾಂಕ್ರಾಮಿಕ ರೋಗ ಇನ್ನೂ ಮುಂದುವರಿದಿರುವುದರಿಂದ, ನಮ್ಮ ಸರ್ಕಾರ ಈ ಯೋಜನೆಯನ್ನು ಮುಂದಿನ ವರ್ಷದ ಹೋಳಿವರೆಗೆ(ಮಾರ್ಚ್) ವಿಸ್ತರಿಸಲು ನಿರ್ಧರಿಸಿದೆ‘ ಎಂದು ಅವರು ಹೇಳಿದರು.</p>.<p>ಈ ಯೋಜನೆಯಡಿ, ಎಲ್ಲ ಫಲಾನುಭವಿಗಳಿಗೆ ಗೋಧಿ ಮತ್ತು ಅಕ್ಕಿಯೊಂದಿಗೆ ಉಪ್ಪು, ಸಕ್ಕರೆ, ಬೇಳೆ ಮತ್ತು ಎಣ್ಣೆಯನ್ನು ನೀಡಲಾಗುತ್ತಿದೆ. ‘ಯೋಜನೆಯನ್ನು ವಿಸ್ತರಿಸುವ ತಮ್ಮ ಸರ್ಕಾರದ ಈ ನಿರ್ಧಾರದಿಂದ ಉತ್ತರ ಪ್ರದೇಶ ರಾಜ್ಯದ 15 ಕೋಟಿ ಜನರಿಗೆ ಪ್ರಯೋಜನವಾಗಲಿದೆ‘ ಎಂದು ಆದಿತ್ಯನಾಥ್ ಹೇಳಿದರು.</p>.<p>ಇದೇ ವೇಳೆ ₹661 ಕೋಟಿ ವೆಚ್ಚದ 50ಕ್ಕೂ ಹೆಚ್ಚು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ (ಉತ್ತರ ಪ್ರದೇಶ): </strong>ಹಿಂದೆ ಉತ್ತರ ಪ್ರದೇಶದಲ್ಲಿದ್ದ ಸರ್ಕಾರ ಸಾರ್ವಜನಿಕರ ಹಣವನ್ನು ‘ಖಬರಸ್ತಾನ‘ಕ್ಕೆ ವಿನಿಯೋಗಿಸುತ್ತಿತ್ತು, ಆದರೆ ಬಿಜೆಪಿ ಆಡಳಿತದಲ್ಲಿ ಆ ಹಣವನ್ನು ದೇವಸ್ಥಾನಗಳ ಪುನರ್ ಅಭಿವೃದ್ಧಿಗೆ ಬಳಸುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.</p>.<p>ದೀಪೋತ್ಸವ ಆಚರಣೆ ಅಂಗವಾಗಿ ಇಲ್ಲಿನ ರಾಮ ಕಥಾ ಪಾರ್ಕ್ನಲ್ಲಿ ಬುಧವಾರಉತ್ತರ ಪ್ರದೇಶ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,</p>.<p>‘ಖಬರಸ್ತಾನದ ಬಗ್ಗೆ ಪ್ರೀತಿ ಇರುವವರು ಜನರ ಹಣವನ್ನು ಅದರ ಅಭಿವೃದ್ಧಿಗೆ ವೆಚ್ಚ ಮಾಡುತ್ತಾರೆ. ಧರ್ಮ ಮತ್ತು ಸಂಸ್ಕೃತಿ ಬಗ್ಗೆ ಪ್ರೀತಿ ಇರುವವರು ಆ ಹಣವನ್ನು ದೇವಸ್ಥಾನದ ಅಭಿವೃದ್ಧಿಗೆ ಖರ್ಚು ಮಾಡುತ್ತಿದ್ದಾರೆ. ಇದೇ ಇಬ್ಬರ ನಡುವಿರುವ ವ್ಯತ್ಯಾಸʼಎಂದು ಹೇಳಿದರು.</p>.<p>ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಉತ್ತರ ಪ್ರದೇಶದ 500 ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ನವೀಕರಣಕ್ಕಾಗಿ ಕೇಂದ್ರ ಸರ್ಕಾರವು ವಿವಿಧ ಯೋಜನೆ ಗಳನ್ನು ಜಾರಿಗೊಳಿಸುತ್ತಿದೆ ಎಂದು ಅವರು ಹೇಳಿದರು.</p>.<p>‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳಿಗೆ ಮುಂದಿನ ವರ್ಷದ ಹೋಳಿ ಹಬ್ಬದವರೆಗೆ ಉಚಿತ ಪಡಿತರ ವಿತರಣೆಯನ್ನು ಮುಂದುವರಿಸಲಾಗುವುದು‘ ಎಂದು ಇದೇ ವೇಳೆ ಪ್ರಕಟಿಸಿದರು.</p>.<p>‘ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಬಡವರಿಗೆ ಉಚಿತವಾಗಿ ಪಡಿತರ ನೀಡುವುದಕ್ಕಾಗಿ ಈ ಯೋಜನೆಯನ್ನು ಆರಂಭಿಸಲಾಗಿತ್ತು. ಅದು ಇದೇ ನವೆಂಬರ್ಗೆ ಮುಕ್ತಾಯಗೊಳ್ಳಲಿದೆ. ಆದರೆ, ಸಾಂಕ್ರಾಮಿಕ ರೋಗ ಇನ್ನೂ ಮುಂದುವರಿದಿರುವುದರಿಂದ, ನಮ್ಮ ಸರ್ಕಾರ ಈ ಯೋಜನೆಯನ್ನು ಮುಂದಿನ ವರ್ಷದ ಹೋಳಿವರೆಗೆ(ಮಾರ್ಚ್) ವಿಸ್ತರಿಸಲು ನಿರ್ಧರಿಸಿದೆ‘ ಎಂದು ಅವರು ಹೇಳಿದರು.</p>.<p>ಈ ಯೋಜನೆಯಡಿ, ಎಲ್ಲ ಫಲಾನುಭವಿಗಳಿಗೆ ಗೋಧಿ ಮತ್ತು ಅಕ್ಕಿಯೊಂದಿಗೆ ಉಪ್ಪು, ಸಕ್ಕರೆ, ಬೇಳೆ ಮತ್ತು ಎಣ್ಣೆಯನ್ನು ನೀಡಲಾಗುತ್ತಿದೆ. ‘ಯೋಜನೆಯನ್ನು ವಿಸ್ತರಿಸುವ ತಮ್ಮ ಸರ್ಕಾರದ ಈ ನಿರ್ಧಾರದಿಂದ ಉತ್ತರ ಪ್ರದೇಶ ರಾಜ್ಯದ 15 ಕೋಟಿ ಜನರಿಗೆ ಪ್ರಯೋಜನವಾಗಲಿದೆ‘ ಎಂದು ಆದಿತ್ಯನಾಥ್ ಹೇಳಿದರು.</p>.<p>ಇದೇ ವೇಳೆ ₹661 ಕೋಟಿ ವೆಚ್ಚದ 50ಕ್ಕೂ ಹೆಚ್ಚು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>