<p><strong>ನವದೆಹಲಿ: </strong>ಪೂರ್ವಲಡಾಖ್ನಲ್ಲಿನ ಗಡಿ ಬಿಕ್ಕಟ್ಟು ಶಮನಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ ಭಾನುವಾರ (ಅ.10) ಮಿಲಿಟರಿ ಅಧಿಕಾರಿಗಳ ನಡುವೆ 13ನೇ ಸುತ್ತಿನ ಉನ್ನತ ಮಟ್ಟದ ಮಾತುಕತೆ ನಡೆಯಲಿದೆ.</p>.<p>ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಚೀನಾ ಅಧೀನಕ್ಕೆ ಒಳಪಟ್ಟ ಪ್ರದೇಶದಲ್ಲಿರುವ ಮೊಲ್ಡೊ ಗಡಿ ಠಾಣೆಯಲ್ಲಿ ಬೆಳಿಗ್ಗೆ 10.30ಕ್ಕೆ ಮಾತುಕತೆ ನಡೆಯಲಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.</p>.<p>ಉತ್ತರಾಖಂಡದ ಬಾರಾಹೋತಿ ಸೆಕ್ಟರ್ ಹಾಗೂ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಇತ್ತೀಚೆಗೆ ಚೀನಾ ಯೋಧರ ಅತಿಕ್ರಮಣ ಯತ್ನವನ್ನು ಭಾರತೀಯ ಸೇನಾಪಡೆಗಳು ವಿಫಲಗೊಳಿಸಿದ್ದವು. ಈ ಘಟನೆಗಳ ಹಿನ್ನೆಲೆಯಲ್ಲಿ 13ನೇ ಸುತ್ತಿನ ಮಾತುಕತೆ ಆಯೋಜಿಸಲಾಗಿದೆ ಎಂದು ಇವೇ ಮೂಲಗಳು ಹೇಳಿವೆ.</p>.<p>ಸಂಘರ್ಷಪೀಡಿತ ಇತರ ಸ್ಥಳಗಳಿಂದ ಯೋಧರನ್ನು ತ್ವರಿತವಾಗಿ ಹಿಂದಕ್ಕೆ ಕರೆಸಿಕೊಳ್ಳಬೇಕು ಎಂಬುದಕ್ಕೆ ಭಾರತ ಈ ಮಾತುಕತೆ ವೇಳೆ ಒತ್ತು ನೀಡುವ ನಿರೀಕ್ಷೆ ಇದೆ. ಡೆಪ್ಸಾಂಗ್ ಹಾಗೂ ಡೆಮ್ಚೊಕ್ಗೆ ಸಂಬಂಧಿಸಿ ನಿರ್ಣಯ ಅಂಗೀಕರಿಸಬೇಕು ಎಂಬುದನ್ನು ಸಹ ಭಾರತ ಪ್ರಸ್ತಾಪಿಸಲಿದೆ ಎಂದು ಇವೇ ಮೂಲಗಳು ಹೇಳಿವೆ.</p>.<p>ಉಭಯ ದೇಶಗಳ ಮಿಲಿಟರಿ ಅಧಿಕಾರಿ ನಡುವಿನ 12ನೇ ಸುತ್ತಿನ ಮಾತುಕತೆ ಜುಲೈ 31ರಂದು ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪೂರ್ವಲಡಾಖ್ನಲ್ಲಿನ ಗಡಿ ಬಿಕ್ಕಟ್ಟು ಶಮನಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ ಭಾನುವಾರ (ಅ.10) ಮಿಲಿಟರಿ ಅಧಿಕಾರಿಗಳ ನಡುವೆ 13ನೇ ಸುತ್ತಿನ ಉನ್ನತ ಮಟ್ಟದ ಮಾತುಕತೆ ನಡೆಯಲಿದೆ.</p>.<p>ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಚೀನಾ ಅಧೀನಕ್ಕೆ ಒಳಪಟ್ಟ ಪ್ರದೇಶದಲ್ಲಿರುವ ಮೊಲ್ಡೊ ಗಡಿ ಠಾಣೆಯಲ್ಲಿ ಬೆಳಿಗ್ಗೆ 10.30ಕ್ಕೆ ಮಾತುಕತೆ ನಡೆಯಲಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.</p>.<p>ಉತ್ತರಾಖಂಡದ ಬಾರಾಹೋತಿ ಸೆಕ್ಟರ್ ಹಾಗೂ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಇತ್ತೀಚೆಗೆ ಚೀನಾ ಯೋಧರ ಅತಿಕ್ರಮಣ ಯತ್ನವನ್ನು ಭಾರತೀಯ ಸೇನಾಪಡೆಗಳು ವಿಫಲಗೊಳಿಸಿದ್ದವು. ಈ ಘಟನೆಗಳ ಹಿನ್ನೆಲೆಯಲ್ಲಿ 13ನೇ ಸುತ್ತಿನ ಮಾತುಕತೆ ಆಯೋಜಿಸಲಾಗಿದೆ ಎಂದು ಇವೇ ಮೂಲಗಳು ಹೇಳಿವೆ.</p>.<p>ಸಂಘರ್ಷಪೀಡಿತ ಇತರ ಸ್ಥಳಗಳಿಂದ ಯೋಧರನ್ನು ತ್ವರಿತವಾಗಿ ಹಿಂದಕ್ಕೆ ಕರೆಸಿಕೊಳ್ಳಬೇಕು ಎಂಬುದಕ್ಕೆ ಭಾರತ ಈ ಮಾತುಕತೆ ವೇಳೆ ಒತ್ತು ನೀಡುವ ನಿರೀಕ್ಷೆ ಇದೆ. ಡೆಪ್ಸಾಂಗ್ ಹಾಗೂ ಡೆಮ್ಚೊಕ್ಗೆ ಸಂಬಂಧಿಸಿ ನಿರ್ಣಯ ಅಂಗೀಕರಿಸಬೇಕು ಎಂಬುದನ್ನು ಸಹ ಭಾರತ ಪ್ರಸ್ತಾಪಿಸಲಿದೆ ಎಂದು ಇವೇ ಮೂಲಗಳು ಹೇಳಿವೆ.</p>.<p>ಉಭಯ ದೇಶಗಳ ಮಿಲಿಟರಿ ಅಧಿಕಾರಿ ನಡುವಿನ 12ನೇ ಸುತ್ತಿನ ಮಾತುಕತೆ ಜುಲೈ 31ರಂದು ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>