ನವದೆಹಲಿ:ಶಿವಸೇನಾದ ಬಂಡಾಯ ಬಣ, ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಗುಂಪು ಬಿಲ್ಲು ಮತ್ತು ಬಾಣದ ಗುರುತನ್ನು ಪಕ್ಷದ ಚಿಹ್ನೆಯಾಗಿ ಹಂಚಿಕೆ ಮಾಡಬೇಕೆಂದು ಮನವಿ ಮಾಡಿದ್ದು, ಈ ಸಂಬಂಧ ಚುನಾವಣಾ ಆಯೋಗವು ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಶನಿವಾರ ಮಧ್ಯಾಹ್ನ 2 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.