ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚಾರ ನಿಷೇಧ ಪ್ರಜಾಪ್ರಭುತ್ವ ವಿರೋಧಿ, ಅಸಾಂವಿಧಾನಿಕ ಎಂದ ಮಮತಾ: ನಾಳೆ ಧರಣಿ

Last Updated 12 ಏಪ್ರಿಲ್ 2021, 15:54 IST
ಅಕ್ಷರ ಗಾತ್ರ

ಕೋಲ್ಕತ್ತ: ತಮ್ಮ ಚುನಾವಣಾ ಪ್ರಚಾರಕ್ಕೆ ನಿಷೇಧ ಹೇರಿರುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಾಂವಿಧಾನಿಕ ಕ್ರಮ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಆಯೋಗದ ಕ್ರಮದ ವಿರುದ್ಧ ಪ್ರತಿಭಟನಾರ್ಥವಾಗಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಕೋಲ್ಕತ್ತದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸುವುದಾಗಿ ಅವರು ಹೇಳಿದ್ದಾರೆ.

ಚುನಾವಣಾ ಆಯೋಗವು ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದೆ. ಇದು ಪ್ರಜಾಪ್ರಭುತ್ವದ ಕರಾಳ ದಿನ ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್‌‌ ಓʼಬ್ರಿಯಾನ್ ಹೇಳಿದ್ದಾರೆ.

ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಭದ್ರತಾಪಡೆಗಳ ವಿರುದ್ಧ ಮಮತಾ ಬ್ಯಾನರ್ಜಿ ಅವರು ನೀಡಿರುವ ಹೇಳಿಕೆಗಳು ರಾಜ್ಯದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತದೆ. ಹೀಗಾಗಿ ಅವರ ಪ್ರಚಾರದ ಮೇಲೆ ಏಪ್ರಿಲ್ 12ರ ರಾತ್ರಿ 8 ಗಂಟೆಯಿಂದ ಏಪ್ರಿಲ್ 13ರ ರಾತ್ರಿ 8 ಗಂಟೆಯ ವರೆಗೆ ನಿಷೇಧ ವಿಧಿಸಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ ರಾತ್ರಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT