ನವೆಂಬರ್ 3ರಂದು ನಡೆಯಲಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ 14 ಕೊನೆಯ ದಿನಾಂಕವಾಗಿದೆ. ಶಾಸಕ ರಮೇಶ್ ಲಟ್ಕೆ ಅವರ ನಿಧನಿಂದಾಗಿ ಉಪಚುನಾವಣೆ ಅನಿವಾರ್ಯವಾಗಿದ್ದು, ಲಟ್ಕೆ ಅವರ ಪತ್ನಿ ರುತುತಾ ಲಟ್ಕೆ ಅವರನ್ನು ಕಣಕ್ಕಿಳಿಸಲು ಉದ್ಧವ್ ಬಣ ನಿರ್ಧರಿಸಿದೆ. ಬೃಹನ್ಮುಂಬೈ ಮಹಾನಗರ ಪಾಲಿಕೆ ಸದಸ್ಯ ಮುರ್ಜಿ ಪಟೇಲ್ ಅವರನ್ನು ಕಣಕ್ಕಿಳಿಸಲು ಶಿಂದೆ ಬಣ ನಿರ್ಧರಿಸಿದೆ. ಕಾಂಗ್ರೆಸ್, ಎನ್ಸಿಪಿ ಪಕ್ಷಗಳು ಠಾಕ್ರೆ ಬಣದ ಅಭ್ಯರ್ಥಿಗೆ ಬೆಂಬಲ ಸೂಚಿಸಲು ನಿರ್ಧರಿಸಿವೆ.