‘ಐಪಿಎಸ್ ಅಧಿಕಾರಿ ವೀರೇಂದ್ರ (ಆರ್ಆರ್–1985) ಅವರ ಬದಲಿಗೆ ಪಿ.ನೀರಜ್ನಯನ್ ಅವರನ್ನು ಪಶ್ಚಿಮ ಬಂಗಾಳದ ಡಿಜಿಪಿ ಮತ್ತು ಐಜಿಪಿಯಾಗಿ ತಕ್ಷಣದಿಂದಲೇ ನೇಮಕ ಮಾಡಲಾಗಿದೆ. ವೀರೇಂದ್ರ ಅವರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಹೊಣೆ ವಹಿಸಬಾರದು. ಆದೇಶವನ್ನು ತಕ್ಷಣವೇ ಜಾರಿಗೊಳಿಸಬಹುದು. ಆದೇಶ ಜಾರಿಗೊಳಿಸಿದ ಬಗ್ಗೆ ಬುಧವಾರ ಬೆಳಿಗ್ಗೆ 10 ಗಂಟೆಯ ಒಳಗಾಗಿ ಆಯೋಗಕ್ಕೆ ಮಾಹಿತಿ ನೀಡಬೇಕು’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.