<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಮತ್ತೊಬ್ಬ ಉದ್ಯಮಿ ಅಮಿತ್ ಅರೋರಾರನ್ನು ಬಂಧಿಸಿದ್ದಾರೆ.</p>.<p>ಅರೋರಾ, ಗುರುಗ್ರಾಮದ ಬಡ್ಡಿ ರೀಟೇಲ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರಾಗಿದ್ದಾರೆ. ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಮಾಡಿದ 6ನೇ ಬಂಧನ ಇದಾಗಿದೆ.</p>.<p>ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯ ವಿವಿಧ ಸೆಕ್ಷನ್ಗಳಡಿ ಕಳೆದ ರಾತ್ರಿ ಅವರನ್ನು ಬಂಧಿಸಲಾಗಿದೆ.</p>.<p>ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ವಶಕ್ಕೆ ಕೇಳುವ ಸಾಧ್ಯತೆ ಇದೆ.</p>.<p>ಸಿಬಿಐ ಎಫ್ಐಆರ್ ಆಧರಿಸಿ ಇ.ಡಿ ದೇಶದ ವಿವಿಧೆಡೆ ದಾಳಿಗಳನ್ನು ಸಂಘಟಿಸಿತ್ತು.</p>.<p>ಈ ಕುರಿತಂತೆ ಇತ್ತೀಚೆಗೆ ಚಾರ್ಜ್ಶೀಟ್ ಸಲ್ಲಿಸಿದ್ದ ಸಿಬಿಐ, ಅಮಿತ್ ಅರೋರಾ ಮತ್ತು ಆತನ ಸಂಗಡಿಗರಾದ ದಿನೇಶ್ ಅರೋರಾ ಮತ್ತು ಅರ್ಜುನ್ ಪಾಂಡೆಯನ್ನು ಆರೋಪಿಗಳೆಂದು ಹೇಳಿತ್ತು. ಈ ಮೂವರೂ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತರು ಎಂದೂ ಸಿಬಿಐ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಮತ್ತೊಬ್ಬ ಉದ್ಯಮಿ ಅಮಿತ್ ಅರೋರಾರನ್ನು ಬಂಧಿಸಿದ್ದಾರೆ.</p>.<p>ಅರೋರಾ, ಗುರುಗ್ರಾಮದ ಬಡ್ಡಿ ರೀಟೇಲ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರಾಗಿದ್ದಾರೆ. ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಮಾಡಿದ 6ನೇ ಬಂಧನ ಇದಾಗಿದೆ.</p>.<p>ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯ ವಿವಿಧ ಸೆಕ್ಷನ್ಗಳಡಿ ಕಳೆದ ರಾತ್ರಿ ಅವರನ್ನು ಬಂಧಿಸಲಾಗಿದೆ.</p>.<p>ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ವಶಕ್ಕೆ ಕೇಳುವ ಸಾಧ್ಯತೆ ಇದೆ.</p>.<p>ಸಿಬಿಐ ಎಫ್ಐಆರ್ ಆಧರಿಸಿ ಇ.ಡಿ ದೇಶದ ವಿವಿಧೆಡೆ ದಾಳಿಗಳನ್ನು ಸಂಘಟಿಸಿತ್ತು.</p>.<p>ಈ ಕುರಿತಂತೆ ಇತ್ತೀಚೆಗೆ ಚಾರ್ಜ್ಶೀಟ್ ಸಲ್ಲಿಸಿದ್ದ ಸಿಬಿಐ, ಅಮಿತ್ ಅರೋರಾ ಮತ್ತು ಆತನ ಸಂಗಡಿಗರಾದ ದಿನೇಶ್ ಅರೋರಾ ಮತ್ತು ಅರ್ಜುನ್ ಪಾಂಡೆಯನ್ನು ಆರೋಪಿಗಳೆಂದು ಹೇಳಿತ್ತು. ಈ ಮೂವರೂ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತರು ಎಂದೂ ಸಿಬಿಐ ಆರೋಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>