ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾಕ್ಕೆ ರಹಸ್ಯ ಮಾಹಿತಿ ಸೋರಿಕೆ: ದೆಹಲಿ ಮೂಲದ ಹವ್ಯಾಸಿ ಪತ್ರಕರ್ತ ಬಂಧನ

Last Updated 3 ಜುಲೈ 2021, 15:05 IST
ಅಕ್ಷರ ಗಾತ್ರ

ನವದೆಹಲಿ: ಚೀನಾದ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ ಮಾಡಿದ ಆರೋಪ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ದೆಹಲಿ ಮೂಲದ ಹವ್ಯಾಸಿ ಪತ್ರಕರ್ತನನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ.

ಬಂಧಿತ ಹವ್ಯಾಸಿ ಪತ್ರಕರ್ತ ರಾಜೀವ್ ಶರ್ಮಾನನ್ನು ಜುಲೈ 1ರಂದು ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಲಾಯಿತು. ನ್ಯಾಯಾಲಯವು ಶರ್ಮಾನನ್ನು ಏಳು ದಿನಗಳವರೆಗೆಇ.ಡಿ ಕಸ್ಟಡಿಗೆ ನೀಡಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

‘ಚೀನಾದ ಗುಪ್ತಚರ ಅಧಿಕಾರಿಗಳಿಗೆ ಗೋಪ್ಯ ಮತ್ತು ಸೂಕ್ಷ್ಮ ಮಾಹಿತಿ ಒದಗಿಸಿದ್ದಕ್ಕಾಗಿ, ಚೀನಾ ಮೂಲದ ಶೆಲ್‌ ಕಂಪನಿಯೊಂದರ ಮೂಲಕ ಹವಾಲ ಹಣವನ್ನು ಶರ್ಮಾ ಮತ್ತು ಇತರ ಅಪರಿಚಿತ ವ್ಯಕ್ತಿಗಳು ಸಂಭಾವನೆಯಾಗಿ ಪಡೆದಿದ್ದಾರೆ’ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ನಗದು ಪಡೆದಿರುವುದರ ಹೊರತಾಗಿ, ಚೀನಾದ ವಿವಿಧ ಕಂಪನಿಗಳು ಮತ್ತು ಭಾರತದ ಇತರ ಕೆಲವು ವ್ಯಾಪಾರ ಕಂಪನಿಗಳೊಂದಿಗೆ ಬೃಹತ್ ವಹಿವಾಟು ಕೂಡ ನಡೆಸಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಇ.ಡಿ ತಿಳಿಸಿದೆ.

ಶರ್ಮಾ ವಿರುದ್ಧದ ಇ.ಡಿ ಪ್ರಕರಣ ಆಧರಿಸಿ ದೆಹಲಿ ಪೊಲೀಸರು ಅಧಿಕೃತ ರಹಸ್ಯ ಕಾಯ್ದೆ (ಒಎಸ್ಎ) ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿ ಕಳೆದ ವರ್ಷವೇ ಎಫ್ಐಆರ್ ದಾಖಲಿಸಿದ್ದರು. ಕಳೆದ ವರ್ಷದ ಸೆಪ್ಟೆಂಬರ್‌ 14ರಂದು ದೆಹಲಿ ಪೊಲೀಸರು ಈತನನ್ನು ಬಂಧಿಸಿದ್ದರು. ಭಾರತೀಯ ಸೇನೆಯ ನಿಯೋಜನೆ ಮತ್ತು ದೇಶದ ಗಡಿ ಕಾರ್ಯತಂತ್ರದ ಬಗ್ಗೆ ಚೀನಾದ ಗುಪ್ತಚರ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ ಆರೋಪ ಶರ್ಮಾ ಮೇಲೆ ಇದೆ.

ಬಂಧನಕ್ಕೊಳಗಾದ 60 ದಿನಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸಿಲ್ಲ ಎಂಬ ಕಾರಣಕ್ಕೆ ಪತ್ರಕರ್ತನಿಗೆ 2020ರ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು.

ಶರ್ಮಾ ಸಾವಿರಾರು ಅನುಯಾಯಿಗಳನ್ನು ಹೊಂದಿರುವ ‘ರಾಜೀವ್ ಕಿಷ್ಕಿಂಧಾ’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದಾರೆ. ಬಂಧನದ ದಿನ ಅವರು ಎರಡು ವೀಡಿಯೊಗಳನ್ನು ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಿದ್ದಾರೆ. ಒಂದು ಗಡಿ ಉದ್ವಿಗ್ನತೆ ಬಗ್ಗೆ ಇದ್ದರೆ, ಇನ್ನೊಂದರಲ್ಲಿ ಸದ್ಯದ ಪತ್ರಿಕೋದ್ಯಮದ ಸ್ಥಿತಿಯ ಕುರಿತು ವಿವರಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT