<p>ತಿರುವನಂತಪುರ: ಯುಎಇ ಮೂಲದ ಕಂಪನಿ ಪ್ರಾಯೋಜಿತ ವಸತಿ ಯೋಜನೆಯೊಂದರ ಅಕ್ರಮಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯದ(ಇ ಡಿ) ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಕಳೆದ ತಿಂಗಳು ಸೇವೆಯಿಂದ ನಿವೃತ್ತರಾಗಿರುವ ಶಿವಶಂಕರ್ ಅವರನ್ನು ಈ ಹಿಂದೆಯೂ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದರು. ಮೂರು ತಿಂಗಳಿಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರು.</p>.<p>ವಸತಿ ಯೋಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು ಕಳೆದ ಎರಡು ದಿನಗಳಿಂದ ಕೊಚ್ಚಿಯಲ್ಲಿ ಇಡಿ ವಿಚಾರಣೆ ನಡೆಸುತ್ತಿತ್ತು. ಮಂಗಳವಾರ ತಡರಾತ್ರಿ ಅವರನ್ನು ಬಂಧಿಸಲಾಗಿದೆ. ಇಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<p>ತ್ರಿಶೂರ್ ಜಿಲ್ಲೆಯ ವಡಕ್ಕಂಚೇರಿಯಲ್ಲಿ ವಸತಿ ಯೋಜನೆಯನ್ನು ಖಾಸಗಿ ಸಂಸ್ಥೆ ಯುನಿಟಾಕ್ಗೆ ನೀಡಲು ಶಿವಶಂಕರ್ ಲಂಚ ಪಡೆದಿದ್ದಾರೆ ಎಂಬ ಆರೋಪವಿದೆ.</p>.<p>₹4 ಕೋಟಿಗೂ ಅಧಿಕ ಹಣವನ್ನು ವಿವಿಧ ವ್ಯಕ್ತಿಗಳಿಗೆ ಕಮಿಷನ್ ನೀಡಿರುವುದಾಗಿ ಕಂಪನಿ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದರು. ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರ ಬ್ಯಾಂಕ್ ಲಾಕರ್ನಿಂದ ವಶಪಡಿಸಿಕೊಂಡ ಸುಮಾರು ₹1 ಕೋಟಿ ಹಣ ಶಿವಶಂಕರ್ ಕಮಿಷನ್ ಪಡೆದಿರುವ ಹಣವಿರಬಹುದು ಎಂದು ಶಂಕಿಸಲಾಗಿದೆ.</p>.<p>ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರ ಅಕ್ಟೋಬರ್ನಲ್ಲಿ ಶಿವಶಂಕರ್ ಅವರನ್ನು ಇ.ಡಿ ಬಂಧಿಸಿತ್ತು. ಆರೋಪ ಬಂದಾಗ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಜಾಮೀನು ಪಡೆದ ನಂತರ ಮತ್ತ ಸೇವೆಗೆ ಮರುಸೇರ್ಪಡೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿರುವನಂತಪುರ: ಯುಎಇ ಮೂಲದ ಕಂಪನಿ ಪ್ರಾಯೋಜಿತ ವಸತಿ ಯೋಜನೆಯೊಂದರ ಅಕ್ರಮಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯದ(ಇ ಡಿ) ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಕಳೆದ ತಿಂಗಳು ಸೇವೆಯಿಂದ ನಿವೃತ್ತರಾಗಿರುವ ಶಿವಶಂಕರ್ ಅವರನ್ನು ಈ ಹಿಂದೆಯೂ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದರು. ಮೂರು ತಿಂಗಳಿಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರು.</p>.<p>ವಸತಿ ಯೋಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು ಕಳೆದ ಎರಡು ದಿನಗಳಿಂದ ಕೊಚ್ಚಿಯಲ್ಲಿ ಇಡಿ ವಿಚಾರಣೆ ನಡೆಸುತ್ತಿತ್ತು. ಮಂಗಳವಾರ ತಡರಾತ್ರಿ ಅವರನ್ನು ಬಂಧಿಸಲಾಗಿದೆ. ಇಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<p>ತ್ರಿಶೂರ್ ಜಿಲ್ಲೆಯ ವಡಕ್ಕಂಚೇರಿಯಲ್ಲಿ ವಸತಿ ಯೋಜನೆಯನ್ನು ಖಾಸಗಿ ಸಂಸ್ಥೆ ಯುನಿಟಾಕ್ಗೆ ನೀಡಲು ಶಿವಶಂಕರ್ ಲಂಚ ಪಡೆದಿದ್ದಾರೆ ಎಂಬ ಆರೋಪವಿದೆ.</p>.<p>₹4 ಕೋಟಿಗೂ ಅಧಿಕ ಹಣವನ್ನು ವಿವಿಧ ವ್ಯಕ್ತಿಗಳಿಗೆ ಕಮಿಷನ್ ನೀಡಿರುವುದಾಗಿ ಕಂಪನಿ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದರು. ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರ ಬ್ಯಾಂಕ್ ಲಾಕರ್ನಿಂದ ವಶಪಡಿಸಿಕೊಂಡ ಸುಮಾರು ₹1 ಕೋಟಿ ಹಣ ಶಿವಶಂಕರ್ ಕಮಿಷನ್ ಪಡೆದಿರುವ ಹಣವಿರಬಹುದು ಎಂದು ಶಂಕಿಸಲಾಗಿದೆ.</p>.<p>ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರ ಅಕ್ಟೋಬರ್ನಲ್ಲಿ ಶಿವಶಂಕರ್ ಅವರನ್ನು ಇ.ಡಿ ಬಂಧಿಸಿತ್ತು. ಆರೋಪ ಬಂದಾಗ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಜಾಮೀನು ಪಡೆದ ನಂತರ ಮತ್ತ ಸೇವೆಗೆ ಮರುಸೇರ್ಪಡೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>