<p><strong>ಮುಂಬೈ:</strong> ಭೂಗತ ಜಗತ್ತಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ, ಎನ್ಸಿಪಿ ಮುಖಂಡ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ ಬಂಧಿಸಿದೆ.</p>.<p>ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟಿಸಿದೆ.</p>.<p>ಭೂಗತ ಪಾತಕಿ ದಾವೂದ್ ಇಬ್ರಾಹಿಂ ಚಟುವಟಿಕೆಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ನವಾಬ್ ಮಲಿಕ್ ಅವರನ್ನು ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಜಾರಿ ನಿರ್ದೇಶನಾಲಯ ಬುಧವಾರ ಮಧ್ನಾಹ್ನ 3 ಗಂಟೆ ವೇಳೆಗೆ ಬಂಧಿಸಿದೆ.</p>.<p>ಇ.ಡಿ. ಹಲವು ಕಡೆಗಳಲ್ಲಿಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮಹಾ ವಿಕಾಸ್ ಆಘಾಡಿ (ಎಂವಿಎ) ಮೈತ್ರಿಕೂಟದ ಸಚಿವರು ಬಂಧನಕ್ಕೊಳಗಾಗಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನವನ್ನುಂಟು ಮಾಡಿದೆ.</p>.<p>ಇ.ಡಿ. ಕಚೇರಿಯಿಂದ ಪೊಲೀಸರು ಹಾಗೂ ಅಧಿಕಾರಿಗಳು ಕರೆದೊಯ್ಯುತ್ತಿದ್ದಾಗ ಪ್ರತಿಕ್ರಿಯಿಸಿರುವ ನವಾಬ್ ಮಲಿಕ್, 'ಸೋಲೊಪ್ಪಿಕೊಳ್ಳುವುದಿಲ್ಲ, ಹೋರಾಡಿ ಗೆಲ್ಲುತ್ತೇನೆ' ಎಂದು ಹೇಳಿದ್ದಾರೆ.</p>.<p>2021 ನವೆಂಬರ್ 2ರಂದು ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಬಂಧಿಸಿದ್ದ ಬಳಿಕ ನವಾಬ್ ಮಲಿಕ್, ಇ.ಡಿ. ಬಲೆಗೆ ಬಿದ್ದಿರುವ ಎರಡನೇ ಪ್ರಮುಖ ಎನ್ಸಿಪಿ ನಾಯಕ ಎಂದೆನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಭೂಗತ ಜಗತ್ತಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ, ಎನ್ಸಿಪಿ ಮುಖಂಡ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ ಬಂಧಿಸಿದೆ.</p>.<p>ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟಿಸಿದೆ.</p>.<p>ಭೂಗತ ಪಾತಕಿ ದಾವೂದ್ ಇಬ್ರಾಹಿಂ ಚಟುವಟಿಕೆಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ನವಾಬ್ ಮಲಿಕ್ ಅವರನ್ನು ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಜಾರಿ ನಿರ್ದೇಶನಾಲಯ ಬುಧವಾರ ಮಧ್ನಾಹ್ನ 3 ಗಂಟೆ ವೇಳೆಗೆ ಬಂಧಿಸಿದೆ.</p>.<p>ಇ.ಡಿ. ಹಲವು ಕಡೆಗಳಲ್ಲಿಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮಹಾ ವಿಕಾಸ್ ಆಘಾಡಿ (ಎಂವಿಎ) ಮೈತ್ರಿಕೂಟದ ಸಚಿವರು ಬಂಧನಕ್ಕೊಳಗಾಗಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನವನ್ನುಂಟು ಮಾಡಿದೆ.</p>.<p>ಇ.ಡಿ. ಕಚೇರಿಯಿಂದ ಪೊಲೀಸರು ಹಾಗೂ ಅಧಿಕಾರಿಗಳು ಕರೆದೊಯ್ಯುತ್ತಿದ್ದಾಗ ಪ್ರತಿಕ್ರಿಯಿಸಿರುವ ನವಾಬ್ ಮಲಿಕ್, 'ಸೋಲೊಪ್ಪಿಕೊಳ್ಳುವುದಿಲ್ಲ, ಹೋರಾಡಿ ಗೆಲ್ಲುತ್ತೇನೆ' ಎಂದು ಹೇಳಿದ್ದಾರೆ.</p>.<p>2021 ನವೆಂಬರ್ 2ರಂದು ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಬಂಧಿಸಿದ್ದ ಬಳಿಕ ನವಾಬ್ ಮಲಿಕ್, ಇ.ಡಿ. ಬಲೆಗೆ ಬಿದ್ದಿರುವ ಎರಡನೇ ಪ್ರಮುಖ ಎನ್ಸಿಪಿ ನಾಯಕ ಎಂದೆನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>