ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ಗೆ ವಂಚನೆ ಪ್ರಕರಣ: ಶಕ್ತಿಭೋಗ್ ಫುಡ್ಸ್‌ ಸಂಸ್ಥೆಯ ಅಧ್ಯಕ್ಷರ ಬಂಧನ

Last Updated 5 ಜುಲೈ 2021, 12:04 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕ್‌ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದು ವಂಚಿಸಿದ ಆರೋಪದಡಿ ದೆಹಲಿ ಮೂಲದ ಶಕ್ತಿಭೋಗ್ ಫುಡ್ಸ್‌ ಲಿಮಿಟೆಡ್‌ ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೇವಲ್‌ ಕೃಷನ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ಭಾನುವಾರ ರಾತ್ರಿ ಬಂಧಿಸಲಾಗಿದ್ದು, ಸೋಮವಾರ ವಿಶೇಷ ಪಿಎಂಎಲ್‌ಎ ಕೋರ್ಟ್‌ ಎದುರು ಹಾಜರುಪಡಿಸಲಾಯಿತು. ಕೋರ್ಟ್‌ ಜುಲೈ 9ರವರೆಗೂ ಇ.ಡಿ ವಶಕ್ಕೆ ವಿಚಾರಣೆಗೆ ಒಪ್ಪಿಸಿದೆ ಎಂದು ಹೇಳಿಕೆಯು ತಿಳಿಸಿದೆ. ಬಂಧನಕ್ಕೂ ಮೊದಲು ಅಧಿಕಾರಿಗಳು ದೆಹಲಿ ಮತ್ತು ಹರಿಯಾಣದಲ್ಲಿ ಒಂಭತ್ತು ಕಡೆ ದಾಳಿ ನಡೆಸಿದ್ದರು.

ದಾಳಿಯ ವೇಳೆಗೆ ವಂಚನೆಗೆ ಸಂಬಂಧಿತ ದಾಖಲೆಗಳು, ಡಿಜಿಟಲ್‌ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಇ.ಡಿ ಈ ಸಂಬಂಧ ಸಿಬಿಐನ ಎಫ್‌ಐಆರ್‌ ಆಧರಿಸಿ ಪಿಎಂಎಲ್‌ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಶಕ್ತಿಭೋಗ್‌ ಫುಡ್ಸ್‌ ಲಿಮಿಟೆಡ್‌ ವಿರುದ್ಧ ₹ 3,269 ಕೋಟಿ ರೂಪಾಯಿ ವಂಚನೆಗೆ ಸಂಬಂಧಿಸಿ ಮೊಕದ್ದಮೆ ದಾಖಲಿಸಿತ್ತು.

24 ವರ್ಷದಷ್ಟು ಹಳೆಯದಾದ ಕಂಪನಿಯು ಆಹಾರ ಸಂಬಂಧಿತ ವಿವಿಧ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, 2008ರಲ್ಲಿ ₹ 1,411 ಕೋಟಿ ಮತ್ತು 2014ರಲ್ಲಿ ₹ 6,000 ಕೋಟಿ ವಹಿವಾಟು ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT