ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ಹಗರಣ: ವೈಎಸ್‌ಆರ್ ಕಾಂಗ್ರೆಸ್ ಸಂಸದರ ಪುತ್ರ ಬಂಧನ

Last Updated 11 ಫೆಬ್ರುವರಿ 2023, 7:08 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶಾನಲಯವು (ಇ.ಡಿ), ವೈಎಸ್‌ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟನನ್ನು ಶನಿವಾರ ಬಂಧಿಸಿದೆ.

ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ರಾಘವ್ ಮಾಗುಂಟ ಅವರನ್ನು ಬಂಧಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ಕಸ್ಟಡಿಗೆ ಕೇಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಾರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಶಿರೋಮಣಿ ಅಕಾಲಿ ದಳದ ಶಾಸಕ ದೀಪ್ ಮಲ್ಹೋತ್ರಾ ಅವರ ಪುತ್ರ ಗೌತಮ್ ಮಲ್ಹೋತ್ರಾ ಮತ್ತು ಜಾಹೀರಾತು ಕಂಪನಿ ಚಾರಿಯಟ್ ಪ್ರೊಡಕ್ಷನ್ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ರಾಜೇಶ್ ಜೋಶಿಯನ್ನು ಇ.ಡಿ ಬಂಧಿಸಿದೆ.

ಪ್ರಕರಣದಲ್ಲಿ ಇದುವರೆಗೆ ಇ.ಡಿ ಎರಡು ಚಾರ್ಜ್‌ಶೀಟ್ ಫೈಲ್ ಮಾಡಿದೆ. ಕೇಂದ್ರ ತನಿಖಾ ದಳ ಸಹ ಎಫ್‌ಐಆರ್ ದಾಖಲಿಸಿದೆ.

ಸಿಬಿಐ ಮತ್ತು ಇ.ಡಿ ದೂರುಗಳಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸರ್ಕಾರದ ಇತರೆ ಅಧಿಕಾರಿಗಳು ಆರೋಪಿಗಳೆಂದು ಹೆಸರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT