ನವದೆಹಲಿ (ಪಿಟಿಐ): ದೇಣಿಗೆ ಮೊತ್ತವನ್ನು ವೈಯಕ್ತಿಕ ಉದ್ದೇಶಕ್ಕೆ ಬಳಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಪತ್ರಕರ್ತೆ ರಾಣಾ ಅಯೂಬ್ ಅವರಿಗೆ ಸೇರಿದ್ದ ₹1.77 ಕೋಟಿ ಮೊತ್ತವನ್ನು ಜಪ್ತಿ ಮಾಡಿದೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ಪತ್ರಕರ್ತೆ ಮತ್ತು ಆಕೆಯ ಕುಟುಂಬ ಸದಸ್ಯರ ಹೆಸರಿನಲ್ಲಿ ನಿಶ್ಚಿತ ಠೇವಣಿ ಮತ್ತು ಇತರೆ ಖಾತೆಗಳಲ್ಲಿದ್ದ ಹಣವನ್ನು ಜಪ್ತಿ ಮಾಡಲಾಗಿದೆ.
ಸಾರ್ವಜನಿಕರ ನೆರವಿಗಾಗಿ ಸಂಗ್ರಹಿಸಿದ್ದ ದೇಣಿಗೆ ಮೊತ್ತವನ್ನು ದುರ್ಬಳಕೆ ಮಾಡಿಕೊಂಡಿದ್ದ ಸಂಬಂದ ಉತ್ತರ ಪ್ರದೇಶದ ಗಾಜಿಯಾಬಾದ್ನ ಪೋಲೀಸರು ಸೆಪ್ಟೆಂಬರ್ 2021ರಲ್ಲಿ ಪ್ರಕರಣ ದಾಖಲಿಸಿದ್ದರು.