ರಾಂಚಿ (ಪಿಟಿಐ): ಜಾರ್ಖಂಡ್ನಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಗಣಿಗಾರಿಕೆ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ವಿಚಾರವಾಗಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಹೊಸದಾಗಿ ಸಮನ್ಸ್ ಜಾರಿಮಾಡಿದೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸ ಬೇಕಿರುವುದರಿಂದ ಇದೇ 17ರಂದು ರಾಂಚಿಯಲ್ಲಿ ತನಿಖಾಧಿಕಾರಿಗಳ ಎದುರು ಹಾಜರಾಗುವಂತೆ ಸೊರೇನ್ ಅವರಿಗೆ ಸೂಚಿಸಲಾಗಿದೆ’ ಎಂದು ಅಧಿಕೃತ ಮೂಲಗಳು ಬುಧವಾರ ಹೇಳಿವೆ.