ಮುಂಬೈ (ಪಿಟಿಐ): ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 5ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮುಂಬೈ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ ಎಂದು ಕೇಂದ್ರೀಯ ಸಂಸ್ಥೆಯ ಅಧಿಕಾರಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಿಂದ ಜೂನ್ 30 ರಂದು ನಿವೃತ್ತರಾದ ಪಾಂಡೆಗೆ ಶನಿವಾರ ಸಮನ್ಸ್ ಕಳುಹಿಸಲಾಗಿದೆ. ಪ್ರತಿಕ್ರಿಯೆಗೆ ಅವರು ಲಭ್ಯರಾಗಲಿಲ್ಲ. ಆದರೆ, ದೆಹಲಿ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ.
ಯಾವ ಪ್ರಕರಣದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂಬುದನ್ನು ಅಧಿಕಾರಿ ಬಹಿರಂಗ ಪಡಿಸಲಿಲ್ಲ.