ಕೋಲ್ಕತ್ತ: ಬಹುಕೋಟಿ ಕಲ್ಲಿದ್ದಲು ಹಗರಣದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ) ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ನರುಲಾ ಬ್ಯಾನರ್ಜಿ ಅವರನ್ನು ವಿಚಾರಣೆ ನಡೆಸಿದೆ.
ಗುರುವಾರ ಬೆಳಗ್ಗೆ ಸುಮಾರು 11 ಗಂಟೆ ವೇಳೆ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡು ಇ.ಡಿ ಕಚೇರಿಗೆ ಬಂದ ರುಜಿರಾ ಅವರನ್ನು ಇಬ್ಬರು ಮಹಿಳೆಯರು ಇದ್ದ ಅಧಿಕಾರಿಗಳ ತಂಡ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕಾಕ್ನಲ್ಲಿ ನಡೆದ ಬ್ಯಾಂಕ್ ಖಾತೆಯ ಕೆಲವು ವ್ಯವಹಾರಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಅವರು ನೀಡಿದ ಮಾಹಿತಿಯನ್ನು ತಾಳೆ ಹಾಕಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.