<p><strong>ನವದೆಹಲಿ:</strong> ವಿದೇಶಗಳಿಂದ ಹಣದ ನೆರವು ಪಡೆದು, ಮತಾಂತರಕ್ಕೆ ಬಳಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದೆಹಲಿ ಮತ್ತು ಉತ್ತರ ಪ್ರದೇಶದ ವಿವಿಧ ಸ್ಥಳಗಳಲ್ಲಿ ಶನಿವಾರ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಕಿವುಡ ವಿದ್ಯಾರ್ಥಿಗಳು ಮತ್ತು ಬಡವರನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ವಿದೇಶದಿಂದ ಹಣಕಾಸಿನ ನೆರವು ನೀಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿದೆಹಲಿ ಮತ್ತು ಉತ್ತರಪ್ರದೇಶಕ್ಕೆ ಸೇರಿದ ಆರು ಸ್ಥಳಗಳಲ್ಲಿ ಅಧಿಕಾರಿಗಳು ಶೋಧಕಾರ್ಯ ಕೈಗೊಂಡಿದ್ದಾರೆ ಎಂದು ಇವೇ ಮೂಲಗಳು ತಿಳಿಸಿವೆ.</p>.<p>ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಕಳೆದ ತಿಂಗಳು ಮತಾಂತರಗೊಳಿಸುವ ಕಾರ್ಯದಲ್ಲಿ ನಿರತವಾಗಿದೆ ಎನ್ನಲಾದ ಜಾಲವನ್ನು ಭೇದಿಸಿತ್ತು. ಈ ಸಂಬಂಧ ದೆಹಲಿಯ ಜಾಮಿಯಾ ನಗರದ ಇಬ್ಬರು ನಿವಾಸಿಗಳಾದ ಮುಫ್ತಿ ಖಾಜಿ ಜಹಾಂಗೀರ್ ಅಲಂ ಕಸ್ಮಿ ಮತ್ತು ಮೊಹಮ್ಮದ್ ಉಮರ್ ಗೌತಮ್ ಎಂಬುವವರನ್ನು ಬಂಧಿಸಿತ್ತು.</p>.<p>ಬಂಧಿತರು, ಇಸ್ಲಾಮಿಕ್ ದಾವಾ ಸೆಂಟರ್ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದರು. ಪಾಕಿಸ್ತಾನದ ಐಎಸ್ಐ ಹಾಗೂ ವಿದೇಶಗಳ ಕೆಲವು ಸಂಸ್ಥೆಗಳಿಂದ ಆರ್ಥಿಕ ನೆರವು ಪಡೆಯುತ್ತಿದ್ದ ಬಂಧಿತರು, ಈ ಹಣವನ್ನು ಮತಾಂತರ ಹಾಗೂ ಇತರ ಅಕ್ರಮ ಚಟುವಟಿಕೆಗಳಿಗೆ ಬಳಸುತ್ತಿದ್ದರು ಎಂದು ಎಟಿಎಸ್ ಆರೋಪಿಸಿತ್ತು.</p>.<p>ನಂತರ, ತನಿಖೆಯನ್ನು ಕೈಗೆತ್ತಿಕೊಂಡಿರುವ ಇ.ಡಿ., ಈ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/ed-issues-fresh-summons-to-ex-maharashtra-home-min-deshmukh-in-money-laundering-case-844630.html" target="_blank">ಮಹಾರಾಷ್ಟ್ರ: ಜು. 5ರಂದು ವಿಚಾರಣೆಗೆ ಹಾಜರಾಗಲು ದೇಶಮುಖ್ಗೆ ಇ.ಡಿ ಸಮನ್ಸ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿದೇಶಗಳಿಂದ ಹಣದ ನೆರವು ಪಡೆದು, ಮತಾಂತರಕ್ಕೆ ಬಳಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದೆಹಲಿ ಮತ್ತು ಉತ್ತರ ಪ್ರದೇಶದ ವಿವಿಧ ಸ್ಥಳಗಳಲ್ಲಿ ಶನಿವಾರ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಕಿವುಡ ವಿದ್ಯಾರ್ಥಿಗಳು ಮತ್ತು ಬಡವರನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ವಿದೇಶದಿಂದ ಹಣಕಾಸಿನ ನೆರವು ನೀಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿದೆಹಲಿ ಮತ್ತು ಉತ್ತರಪ್ರದೇಶಕ್ಕೆ ಸೇರಿದ ಆರು ಸ್ಥಳಗಳಲ್ಲಿ ಅಧಿಕಾರಿಗಳು ಶೋಧಕಾರ್ಯ ಕೈಗೊಂಡಿದ್ದಾರೆ ಎಂದು ಇವೇ ಮೂಲಗಳು ತಿಳಿಸಿವೆ.</p>.<p>ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಕಳೆದ ತಿಂಗಳು ಮತಾಂತರಗೊಳಿಸುವ ಕಾರ್ಯದಲ್ಲಿ ನಿರತವಾಗಿದೆ ಎನ್ನಲಾದ ಜಾಲವನ್ನು ಭೇದಿಸಿತ್ತು. ಈ ಸಂಬಂಧ ದೆಹಲಿಯ ಜಾಮಿಯಾ ನಗರದ ಇಬ್ಬರು ನಿವಾಸಿಗಳಾದ ಮುಫ್ತಿ ಖಾಜಿ ಜಹಾಂಗೀರ್ ಅಲಂ ಕಸ್ಮಿ ಮತ್ತು ಮೊಹಮ್ಮದ್ ಉಮರ್ ಗೌತಮ್ ಎಂಬುವವರನ್ನು ಬಂಧಿಸಿತ್ತು.</p>.<p>ಬಂಧಿತರು, ಇಸ್ಲಾಮಿಕ್ ದಾವಾ ಸೆಂಟರ್ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದರು. ಪಾಕಿಸ್ತಾನದ ಐಎಸ್ಐ ಹಾಗೂ ವಿದೇಶಗಳ ಕೆಲವು ಸಂಸ್ಥೆಗಳಿಂದ ಆರ್ಥಿಕ ನೆರವು ಪಡೆಯುತ್ತಿದ್ದ ಬಂಧಿತರು, ಈ ಹಣವನ್ನು ಮತಾಂತರ ಹಾಗೂ ಇತರ ಅಕ್ರಮ ಚಟುವಟಿಕೆಗಳಿಗೆ ಬಳಸುತ್ತಿದ್ದರು ಎಂದು ಎಟಿಎಸ್ ಆರೋಪಿಸಿತ್ತು.</p>.<p>ನಂತರ, ತನಿಖೆಯನ್ನು ಕೈಗೆತ್ತಿಕೊಂಡಿರುವ ಇ.ಡಿ., ಈ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/ed-issues-fresh-summons-to-ex-maharashtra-home-min-deshmukh-in-money-laundering-case-844630.html" target="_blank">ಮಹಾರಾಷ್ಟ್ರ: ಜು. 5ರಂದು ವಿಚಾರಣೆಗೆ ಹಾಜರಾಗಲು ದೇಶಮುಖ್ಗೆ ಇ.ಡಿ ಸಮನ್ಸ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>